ದಾವಣಗೆರೆ: ಸಂಚಾರಿ ನಿಯಮ ಉಲ್ಲಂಘನೆ; 1.10 ಲಕ್ಷ ಜನರ ದಂಡ‌ ವಸೂಲಿ ಬಾಕಿ ; ಮನೆಗೆ ತೆರಳಿ ದಂಡ ವಸೂಲಿಗೆ ಎಡಿಜಿಪಿ ಅಲೋಕ್ ಕುಮಾರ್ ಸೂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ; ಜಿಲ್ಲೆಯಲ್ಲಿ 1.10 ಲಕ್ಷ ಜನ ಸಂಚಾರ ನಿಯಮ ಉಲ್ಲಂಘನೆ ದಂಡ ಬಾಕಿ ಉಳಿಸಿಕೊಂಡಿದ್ದಾರೆ. ದಂಡ ಕಟ್ಟದ ವ್ಯಕ್ತಿಗಳನ್ನು ಗುರುತಿಸಿ ಅವರ ಮನೆಗೆ ತೆರಳಿ ಹಬ್ಬದಂತೆ ದಂಡ ವಸೂಲಿ ಮಾಡುವಂತೆ ಪೊಲೀಸ್ ಸಿಬ್ಬಂದಿಗೆ ಪೊಲೀಸ್ ತರಬೇತಿ ಕೇಂದ್ರದ ಎಡಿಜಿಪಿ ಅಲೋಕ್ ಕುಮಾರ್ ಸೂಚನೆ ನೀಡಿದರು.

ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ನಂತರ ಮಾತನಾಡಿದ ಅವರು, ಕಳೆದ ವರ್ಷ ರಸ್ತೆ ದುರಂತದಲ್ಲಿ ಹನ್ನೊಂದು ಸಾವಿರದ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಇದರಲ್ಲಿ ಶೇ. 60ಕ್ಕೂ ಹೆಚ್ಚು ಜನ ದ್ವಿಚಕ್ರ ವಾಹನ ಸವಾರರಾಗಿದ್ದಾರೆ. ಇದೇ ಕಾರಣಕ್ಕೆ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ಬೆಂಗಳೂರಿಗಿಂತ ಚೆನ್ನೈನಲ್ಲಿ ಬಿಸಿಲು ಜಾಸ್ತಿ. ಆದರೆ ಚೆನ್ನೈನಲ್ಲಿ ಜಾಸ್ತಿ ಹೆಲ್ಮೆಟ್ ಧರಿಸುತ್ತಾರೆ. ಇಲ್ಲಿ ಯಾಕೆ ಹೆಲ್ಮೆಟ್ ಧರಿಸಲ್ಲ ಎಂದರು.

ಗಾ‌ಂಜಾ ಸೇರಿದಂತೆ ಮಾದಕ ವಸ್ತುಗಳ ಪೂರೈಕೆ ‌ಜಾಗತಿ‌ಮಟ್ಟದಲ್ಲಿ ಹೆಚ್ಚಾಗುತ್ತಿದೆ. ಅಫಘಾನಿಸ್ತಾನದಂತಹ ಇಂತಹ ಮಾದಕ ವಸ್ತುಗಳ ಉತ್ಪಾದನೆ ಹೆಚ್ಚಾಗುತ್ತಿದೆ. ಈ‌ ಹಿನ್ನೆಲೆ ರಾಜ್ಯದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಜೊತೆಗೆ ಗಾಂಜಾ ಪೂರೈಕೆ ಆಗುತ್ತಿರುವ ಖಚಿತ ಮಾಹಿತಿ ಇದ್ದರೆ ಸಾರ್ವಜ‌ನಿಕರು ಪೊಲೀಸರಿಗೆ‌ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು. ಶಾಲಾ ಆವರಣದಲ್ಲಿ ಇಂತಹ ಘಟನೆ ನಡೆಯುತ್ತಿದ್ದರೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *