Connect with us

Dvgsuddi Kannada | online news portal | Kannada news online

ನಿತ್ಯ 3 ಸಾವಿರ ಕ್ಯೂಸೆಕ್ಸ್ ನಂತೆ ತಂಗಭದ್ರಾ ನದಿಗೆ ನೀರು: ನದಿ ಹರಿವು ಪರಿಶೀಲಿಸಿದ ಡಿಸಿ; ಕುಡಿಯುವ ನೀರಿನ ಸಮಸ್ಯೆ ಎದುರಿಸಿದ್ದ ದಾವಣಗೆರೆ, ಹರಿಹರ ಜನ ನಿರಾಳ..!!

ದಾವಣಗೆರೆ

ನಿತ್ಯ 3 ಸಾವಿರ ಕ್ಯೂಸೆಕ್ಸ್ ನಂತೆ ತಂಗಭದ್ರಾ ನದಿಗೆ ನೀರು: ನದಿ ಹರಿವು ಪರಿಶೀಲಿಸಿದ ಡಿಸಿ; ಕುಡಿಯುವ ನೀರಿನ ಸಮಸ್ಯೆ ಎದುರಿಸಿದ್ದ ದಾವಣಗೆರೆ, ಹರಿಹರ ಜನ ನಿರಾಳ..!!

ದಾವಣಗೆರೆ: ಜಿಲ್ಲೆಯಲ್ಲಿ ತೀವ್ರ ಬರ ಹಿನ್ನೆಲೆ ತುಂಗಭದ್ರಾ ನದಿ ನೀರು ಸಂಪೂರ್ಣ ಬತ್ತಿ ಹೋಗಿತ್ತು. ಮುಂಗಾರು ಮಳೆ ಕೊರತೆಯಿಂದಾಗಿ ಭದ್ರಾ ಜಲಾಶಯ ಭರ್ತಿಯಾಗದ ಕಾರಣ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮತ್ತು ಜಿಲ್ಲೆಯ ಬಹುತೇಕ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ನದಿ ನೀರಿನ ಮೇಲೆಯೇ ಅವಲಂಬಿತವಾಗಿತ್ತು.‌ ನದಿ ಬತ್ತಿ ಹೋಗಿದ್ದರಿಂದ ಕುಡಿಯುವ ನೀರಿನ ತೀವ್ರ ಸಮಸ್ಯೆಯಾಗಿತ್ತು.

ನೀರಾವರಿ ನಿಗಮದಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾರ್ಚ್ 29 ರಿಂದ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ಸ್‍ನಂತೆ ಭದ್ರಾ ಜಲಾಶಯದಿಂದ‌ ನದಿಗೆ ನೀರು ಬಿಡಲಾಗುತ್ತಿದೆ. ಇದನ್ನು ಏಪ್ರಿಲ್ 5 ರ ವರೆಗೆ 3 ಸಾವಿರದಂತೆ ಮತ್ತು ಏ.6 ರ ಮಧ್ಯರಾತ್ರಿ ವರೆಗೆ 2200 ಕ್ಯೂಸೆಕ್ಸ್ ನೀರನ್ನು ಬಿಡಲಾಗುತ್ತಿದೆ.

ತುಂಗಭದ್ರಾ ನದಿಯಲ್ಲಿನ ನೀರು ಹರಿಹರದಿಂದ ಮುಂದಕ್ಕೆ ಸಾಗಿದ್ದು ನದಿಯಲ್ಲಿ ಎಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ ಎಂದು ಹರಿಹರ ಸಮೀಪದ ಜಾಕ್‍ವೆಲ್‍ಗೆ ಬುಧವಾರ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ನದಿಯಲ್ಲಿ ನೀರಿನ ಹರಿವು ಗಣನೀಯವಾಗಿ ಇಳಿಕೆಯಾಗಿದ್ದು ದಾವಣಗೆರೆ ನಗರ ಸೇರಿದಂತೆ ಹರಿಹರ ನಗರಕ್ಕೆ 24*7 ಮಾದರಿಯಲ್ಲಿ ನೀರು ಪೂರೈಕೆಗೆ ಸಮಸ್ಯೆಯಾಗಿ ಟ್ಯಾಂಕರ್‍ಗಳ ಮೂಲಕ ನೀರು ಪೂರೈಕೆ ಮಾಡಲು ಸಿದ್ದತೆ ನಡೆಸಲಾಗಿತ್ತು. ತುಂಗಭದ್ರಾ ನದಿಗೆ ನೀರು ಬಂದಿದ್ದರಿಂದ ಸದ್ಯದ ಸ್ಥಿತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾದಂತಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top