Connect with us

Dvgsuddi Kannada | online news portal | Kannada news online

ದಾವಣಗೆರೆ: ಭೀಕರ ದುರಂತ; ದೇವರಬೆಳಕೆರೆ ಪಿಕಪ್ ಡ್ಯಾಂನಲ್ಲಿ ಮುಳುಗಿ ತಂದೆ- ಮಗ ಸಾವು

IMG 20230928 185856

ದಾವಣಗೆರೆ

ದಾವಣಗೆರೆ: ಭೀಕರ ದುರಂತ; ದೇವರಬೆಳಕೆರೆ ಪಿಕಪ್ ಡ್ಯಾಂನಲ್ಲಿ ಮುಳುಗಿ ತಂದೆ- ಮಗ ಸಾವು

ದಾವಣಗೆರೆ: ದೇವರಬೆಳಕೆರೆ ಪಿಕಪ್ ಡ್ಯಾಂನಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ನೀರಿನಲ್ಲಿ ಮುಳುಗಿ ತಂದೆ- ಮಗ ಸಾವು ಸಾವನ್ನಪ್ಪಿದ ಘಟನೆ ನಡೆದಿದೆ. ಡ್ಯಾಂ‌ ನೋಡಲು ಹೋಗಿದ್ದಾಗ ಈ ಘಟನೆ ನಡೆದಿದೆ.

ಹರಿಹರ ತಾಲೂಕಿನ ದೇವರಬೆಳಕೆರೆ ಪಿಕಪ್ ಡ್ಯಾಂನಲ್ಲಿ ಈ ಘಟನೆ ನಡೆದಿದ್ದು, ಮಿಟ್ಲಕಟ್ಟೆ ಗ್ರಾಮದ ಚಂದ್ರಪ್ಪ(42), ಮಗ ಶೌರ್ಯ(9) ಸಾವನ್ನಪ್ಪಿದ ದುರ್ದೈವಿಗಳು. ಇಂದು (ಸೆ.28) ರಜೆ ಹಿನ್ನೆಲೆ ಡ್ಯಾಂ ನೋಡಲು ಅಪ್ಪ ಮಗ ಹೋಗಿದ್ದಾಗ ಈ ದುರ್ಘಟನೆ ನಡೆದಿದೆ.ಇಬ್ಬರು ಮಕ್ಕಳೊಂದಿಗೆ ಡ್ಯಾಂ ನೋಡಲು ಚಂದ್ರಪ್ಪ ಮತ್ತು ಅವರ ಪತ್ನಿ ಬಂದಿದ್ದರು. ಈ ವೇಳೆ ಇಬ್ಬರು ಪುತ್ರರು ನೀರಿನಲ್ಲಿ ಈಜಾಡುತ್ತಿದ್ದರು.

ಈ ವೇಳೆ ನೀರಿನ ಸುಳಿಗೆ ಸಿಲುಕಿದ ಇಬ್ಬರು ಪುತ್ರರೂ ಕೊಚ್ಚಿ ಹೋಗುತ್ತಿದ್ದರು. ಚಂದ್ರಪ್ಪ ಅವರು, ಓರ್ವ ಪುತ್ರನನ್ನು ರಕ್ಷಿಸಿ ದಡಕ್ಕೆ ತಂದು  ಮತ್ತೊಬ್ಬನನ್ನು ಕಾಪಾಡುವ ವೇಳೆ ಪುತ್ರನೊಂದಿಗೆ ತಂದೆಯೂ ನೀರಿನಲ್ಲಿ ಕೊಚ್ಚಿ ಹೋದರು. ತೀವ್ರ ಅಸ್ವಸ್ಥರಾಗಿದ್ದ ಚಂದ್ರಪ್ಪ ಅವರನ್ನು ಬದುಕಿಸಲು ಆಸ್ಪತ್ರೆಗೆ ಕರೆ ತಂದರೂ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನೀರಲ್ಲಿ ಕೊಚ್ಚಿ ಹೋದ ಶೌರ್ಯನ ಶವಕ್ಕಾಗಿ ಡ್ಯಾಂನಲ್ಲಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ಮುಂದುವರಿಸಿದ್ದಾರೆ. ಸ್ಥಳಕ್ಕೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

ದಾವಣಗೆರೆ: ಗಣೇಶ ವಿಸರ್ಜನೆ ವೇಳೆ ಗೆಳೆಯರೊಂದಿಗೆ ನೃತ್ಯ ಮಾಡುವಾಗ ಹೃದಯಾಘಾತ; ಇಂಜಿನಿಯರ್ ಸಾವು

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top