Connect with us

Dvgsuddi Kannada | online news portal | Kannada news online

ಇನ್ಮುಂದೆ ಐತಿಹಾಸಿಕ ಉಚ್ಚಂಗಿದುರ್ಗ ದೇವಸ್ಥಾನದಲ್ಲೂ ಆನ್ ಲೈನ್ ಮೂಲಕ ಕಾಣಿಕೆ ಸಲ್ಲಿಸಬಹುದು…!

IMG 20220917 WA0005

ಹರಪನಹಳ್ಳಿ

ಇನ್ಮುಂದೆ ಐತಿಹಾಸಿಕ ಉಚ್ಚಂಗಿದುರ್ಗ ದೇವಸ್ಥಾನದಲ್ಲೂ ಆನ್ ಲೈನ್ ಮೂಲಕ ಕಾಣಿಕೆ ಸಲ್ಲಿಸಬಹುದು…!

ಹರಪನಹಳ್ಳಿ: ಇನ್ಮುಂದೆ ದೇವಸ್ಥಾನಕ್ಕೆ ಹೋಗುವಾಗ ಕಾಣಿಕೆ ಹಾಕಲು ಕೈಯಲ್ಲಿ ಹಣ ಇಟ್ಟುಕೊಂಡು ಹೋಗಬೇಕು ಎಂದೇನಿಲ್ಲ, ಕೈಯಲ್ಲೊಂದು ಮೊಬೈಲ್ ಇದ್ರೆ ಸಾಕು. ಆ ಮೊಬೈಲ್ ಮೂಲಕವೇ  ದೇವರಿಗೆ ಕಾಣಿಕೆ ಸಲ್ಲಿಸಬಹುದು.

ಹೌದು, ವಿಜಯನಗರ ಜಿಲ್ಲೆ ಐತಿಹಾಸಿಕ ಹಾಗೂ ಧಾರ್ಮಿಕ ಪ್ರಸಿದ್ಧ ಉಚ್ಚoಗೆಮ್ಮ ದೇವಸ್ಥಾನದಲ್ಲಿ ಇ-ಹುಂಡಿ ಅಳವಡಿಕೆ ಮಾಡಲಾಗಿದೆ. ದೇವಸ್ಥಾನದಲ್ಲಿ ಎಸ್.ಬಿ.ಐ ಇ-ಹುಂಡಿ ಕ್ಯೂ-ಆರ್ ಕೋಡ್ ಅಳವಡಿಸಿದ್ದು, ಭಕ್ತರು ಕ್ಯೂ ಆರ್ ಕೋಡ್ ಸ್ಕ್ಯಾನಿಂಗ್ ಮೂಲಕ ಕಾಣಿಕೆ ಸಲ್ಲಿಸಬಹುದು.

ಬಳ್ಳಾರಿ/ವಿಜಯನಗರ ಜಿಲ್ಲೆ ಸಹಾಯಕ ಆಯುಕ್ತರಾದ ಪ್ರಕಾಶ್ ರಾವ್,ದೇವಸ್ಥಾನದ ತಹಶೀಲ್ದಾರ್ ಡಾ. ಶಿವಕುಮಾರ್ ಬಿರಾಧರ್, ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಪ್ಪ, ಎಸ್ ಬಿ ಐ ಬ್ಯಾಂಕ್ ಮುಖ್ಯ ವ್ಯವಸ್ಥಾಪಕಾರದ ಸೆಲ್ವ ಕುಮಾರ್ ಉಚ್ಚoಗೇಮ್ಮನ ದೇವಸ್ಥಾನದಲ್ಲಿ ಎಸ್.ಬಿ.ಐ ಇ-ಹುಂಡಿ ಕ್ಯೂ-ಆರ್ ಕೋಡ್ ಅಳವಡಿಕೆ ಮಾಡಿದರು.

ಈ ವೇಳೆ ಮಾತನಾಡಿದ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಪ್ಪ ಇಂದಿನ ಆಧುನಿಕ ತೆಯ ಡಿಜಿಟಲ್ ಯುಗದಲ್ಲಿ ದೇವಸ್ಥಾನದಲ್ಲಿ ಇ-ಹುಂಡಿ ಕ್ಯೂ-ಆರ್ ಕೋಡ್ ಅಳವಡಿಕೆ ಮಾಡಿದ್ದು ಭಕ್ತಾದಿಗಳು ದೇವಸ್ಥಾನದ ಅಕೌಂಟಿಗೆ ಕ್ಯೂ-ಆರ್ ಕೋಡ್ ಮೂಲಕ ಕಾಣಿಕೆ ಹಾಕಬಹುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಸಿಬ್ಬಂದಿ,ಬ್ಯಾಂಕ್ ಸಿಬ್ಬಂದಿಗಳಾದ ವಸಂತ್ ಉಪಸ್ಥಿತರಿದ್ದರು..

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಪನಹಳ್ಳಿ

To Top