Connect with us

Dvgsuddi Kannada | online news portal | Kannada news online

ಫೆ.28 ರಂದು ದಾವಣಗೆರೆ ವಿ.ವಿ.10ನೇ ಘಟಿಕೋತ್ಸವ; ರಾಜಶೇಖರಯ್ಯ, ಅಥಣಿ ವೀರಣ್ಣ, ಶಿವಣ್ಣಗೆ ಡಾಕ್ಟರೇಟ್​ ಪದವಿ; 81 ಸ್ವರ್ಣ ಪದಕ ವಿತರಣೆ

ದಾವಣಗೆರೆ

ಫೆ.28 ರಂದು ದಾವಣಗೆರೆ ವಿ.ವಿ.10ನೇ ಘಟಿಕೋತ್ಸವ; ರಾಜಶೇಖರಯ್ಯ, ಅಥಣಿ ವೀರಣ್ಣ, ಶಿವಣ್ಣಗೆ ಡಾಕ್ಟರೇಟ್​ ಪದವಿ; 81 ಸ್ವರ್ಣ ಪದಕ ವಿತರಣೆ

ದಾವಣಗೆರೆ: ಫೆ.28ರಂದು ದಾವಣಗೆರೆ ವಿಶ್ವವಿದ್ಯಾನಿಲಯದ 10ನೇ ಘಟಿಕೋತ್ಸವ ಶಿವಗಂಗೋತ್ರಿ ಕ್ಯಾಂಪಸ್​ನಲ್ಲಿ ನಡೆಯಲಿದೆ.‌ ಈ ಬಾರಿಯ ಘಟಿಕೋತ್ಸವದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್ ಪದವಿ, 81 ಸ್ವರ್ಣ ಪದಕ,13,978 ಪದವಿ, ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಗುವುದು ಎಂದು ಉಪ ಕುಲಪತಿ ಬಿ.ಡಿ.ಕುಂಬಾರ ತಿಳಿಸಿದ್ದಾರೆ.

ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದ ಅವರು, ದಾವಣಗೆರೆ ವಿ.ವಿ. ಹತ್ತನೇ ಘಟಿಕೋತ್ಸವದಲ್ಲಿ ರಾಜ್ಯಪಾಲರು ಹಾಗೂ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್​ ಅಧ್ಯಕ್ಷತೆ ವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಕಾರ್ಯಕ್ರಮದಲ್ಲಿ ಭಾಗಿಯಾಲಿದ್ದಾರೆ, ಇದಲ್ಲದೆ ಮುಖ್ಯ ಅತಿಥಿಗಳಾಗಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಪ್ರೊ. ಟಿ. ಜಿ. ಸೀತಾರಾಮ್ ಭಾಗವಹಿಸಲಿದ್ದಾರೆ. ಈ ಬಾರಿ ಘಟಿಕೋತ್ಸವದಲ್ಲಿ ಟಿ.ಎಂ. ರಾಜಶೇಖರಯ್ಯ, ಅಥಣಿ ಎಸ್ ವೀರಣ್ಣ, ಎಂ.ಎಸ್. ಶಿವಣ್ಣ ಅವರು ಡಾಕ್ಟರೇಟ್​ ಪದವಿಗೆ ಭಾಜನರಾಗಿದ್ದಾರೆ.

ಘಟಿಕೋತ್ಸವದಲ್ಲಿ ಒಬ್ಬರು ಮಾಸ್ಟರ್ ಆಫ್ ಫಿಲಾಸಫಿ (ಎಂ.ಫಿಲ್) ಮತ್ತು ನಾಲ್ಕು ಮಂದಿ ಮಹಿಳೆರು ಹಾಗೂ ಹತ್ತು ಮಂದಿ ಪುರುಷರು ಸೇರಿ ಒಟ್ಟು 14 ಜನರು ಡಾಕ್ಟರ್ ಆಫ್ ಫಿಲಾಸಫಿ (ಪಿ.ಹೆಚ್‌.ಡಿ) ಪದವಿ ಸ್ವೀಕರಿಸಲಿದ್ದಾರೆ. 2021-22ನೇ ಸಾಲಿನ ಸ್ನಾತಕ ಪದವಿಯನ್ನು 7,219 ವಿದ್ಯಾರ್ಥಿನಿಯರು ಹಾಗೂ 4,900 ವಿದ್ಯಾರ್ಥಿಗಳು ಸೇರಿ ಒಟ್ಟು 12,179 ವಿದ್ಯಾರ್ಥಿಗಳು ಸ್ವೀಕರಿಸಲಿದ್ದಾರೆ ಎಂದು ಉಪ ಕುಲಪತಿ ಬಿ ಡಿ ಕುಂಬಾರ ತಿಳಿಸಿದರು.

2021-22ನೇ ಸಾಲಿನ ಸ್ನಾತಕೋತ್ತರ ಪದವಿಗಳಲ್ಲಿ 1,161 ವಿದ್ಯಾರ್ಥಿನಿಯರು ಹಾಗೂ 638 ವಿದ್ಯಾರ್ಥಿಗಳು ಸೇರಿ ಒಟ್ಟು 1,700 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆಯಲಿದ್ದು, ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳು ಸೇರಿ ಒಟ್ಟು 13,978 ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ. ಈ ಬಾರಿ ಒಟ್ಟು 81 ಸ್ವರ್ಣ ಪದಕಗಳನ್ನು ನೀಡಲಾಗುವುದು. ಸ್ನಾತಕ ಪದವಿಯಲ್ಲಿ 10 ವಿದ್ಯಾರ್ಥಿನಿಯರು ಹಾಗೂ ನಾಲ್ಕು ವಿದ್ಯಾರ್ಥಿಗಳಿಗೆ ಸೇರಿ ಒಟ್ಟು 14 ವಿದ್ಯಾರ್ಥಿಗಳು 22 ಸ್ವರ್ಣ ಪದಕಗಳನ್ನು ಪಡೆಯಲಿದ್ದಾರೆ. ಹಾಗೂ ಸ್ನಾತಕೋತ್ತರ ಪದವಿಯಲ್ಲಿ 22 ವಿದ್ಯಾರ್ಥಿನಿಯರು ಹಾಗೂ 9 ವಿದ್ಯಾರ್ಥಿಗಳು ಸೇರಿ ಒಟ್ಟು 31 ವಿದ್ಯಾರ್ಥಿಗಳು 59 ಸ್ವರ್ಣ ಪದಕಗಳನ್ನು ಪಡೆಯಲಿದ್ದಾರೆ.

ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಒಟ್ಟು 32 ವಿದ್ಯಾರ್ಥಿನಿರು ಹಾಗೂ 13 ವಿದ್ಯಾರ್ಥಿಗಳು ಸೇರಿ ಒಟ್ಟು 45 ವಿದ್ಯಾರ್ಥಿಗಳು 81 ಚಿನ್ನದ ಪದಕಗಳನ್ನು ಪಡೆದುಕೊಳ್ಳಲಿದ್ದಾರೆ. ಈ ಸಾಲಿನಲ್ಲಿ ವಾಣಿಜ್ಯಶಾಸ್ತ್ರ (ಎಂ.ಕಾಂ) ವಿಭಾಗದ ಹಾಲಮ್ಮ ಬಿ, 5 ಹಾಗೂ ಜೀವರಸಾಯನಶಾಸ್ತ್ರ 5 ಸ್ವರ್ಣ ಪದಕಗಳನ್ನು ಪಡೆಯಲಿದ್ದಾರೆ. 2021-22ನೇ ಶೈಕ್ಷಣಿಕ ವರ್ಷದಲ್ಲಿ ಸ್ನಾತಕ ಪದವಿಯಲ್ಲಿ ಶೇ 73.22% ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಶೇ 96.82% ಫಲಿತಾಂಶ ಬಂದಿದೆ ಎಂದು ವಿವರಿಸಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top