Connect with us

Dvgsuddi Kannada | online news portal | Kannada news online

ದಾವಣಗೆರೆ ವಿಶ್ವ ವಿದ್ಯಾಲಯದ ಮೂವರು ಪ್ರಾಧ್ಯಾಪಕರಿಗೆ  ಶ್ರೇಷ್ಠ ಸಂಶೋಧನಾ ಪ್ರಶಸ್ತಿ

ದಾವಣಗೆರೆ

ದಾವಣಗೆರೆ ವಿಶ್ವ ವಿದ್ಯಾಲಯದ ಮೂವರು ಪ್ರಾಧ್ಯಾಪಕರಿಗೆ  ಶ್ರೇಷ್ಠ ಸಂಶೋಧನಾ ಪ್ರಶಸ್ತಿ

ದಾವಣಗೆರೆ: ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹ, ಮತ್ತು ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ ಶ್ರೇಷ್ಠ ಸಂಶೋಧನಾ ಪ್ರಶಸ್ತಿಗೆ ವಿಶ್ವವಿದ್ಯಾನಿಲಯದ ಮೂವರು ಪ್ರಾಧ್ಯಾಪಕರು ಭಾಜನರಾಗಿದ್ಧಾರೆ.

ದಾವಣಗೆರೆ ವಿಶ್ವ ವಿದ್ಯಾನಿಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಮತ್ತು ಕುಲಸಚಿವೆ  ಪ್ರೊ. ಗಾಯತ್ರಿ ದೇವರಾಜ, ಗಣಿತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಪ್ರಕಾಶ ಡಿ. ಜಿ. ಮತ್ತು ಡಾ. ಪ್ರಸನ್ನ ಕುಮಾರ್ ಬಿ. ಸಿ. ರವರು ಈ ಪ್ರಶಸ್ತಿ ಲಭಿಸಿದೆ.  ಕರ್ನಾಟಕ ರಾಜ್ಯದ ವಿಶ್ವ ವಿದ್ಯಾನಿಲಯಗಳು, ಕಾಲೇಜುಗಳು ಹಾಗೂ ಸಂಶೋಧನಾ ಸಂಸ್ಥೆಗಳಲ್ಲಿ ಕೆಲಸ ಮಾಡುವ ಅಧ್ಯಾಪಕರುಗಳ ಸಂಶೋಧನಾ ಪ್ರಬಂಧಗಳ ಗುಣಾತ್ಮಕ ಮತ್ತು ಪರಿಮಾಣಾತ್ಮಕ ವಿಸ್ತರಣೆಯನ್ನು ಪ್ರೋತ್ಸಾಹಿಸಲು ಪ್ರತೀ ವರ್ಷ 20 ಸಂಶೋಧನಾ ಪ್ರಕಟಣೆಗಳಿಗಾಗಿ ಈ ಪ್ರಶಸ್ತಿ ನೀಡಲಾಗುತ್ತಿದೆ.

ಬೆಂಗಳೂರಿನ ಜವಹಾರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸ್ಟಡೀಸ್‌ನಲ್ಲಿ ನಡೆದ ಸಮಾರಂಭದಲ್ಲಿ ಸಚಿವ  ಡಾ. ಸಿ. ಎನ್. ಅಶ್ವತ್ಥ್ ನಾರಾಯಣ್  ಪ್ರಶಸ್ತಿ  ಪ್ರಧಾನ ಮಾಡಿದರು. ಈ ಸಮಾರಂಭದ ಅಧ್ಯಕ್ಷತೆಯನ್ನು ಭಾರತರತ್ನ ಡಾ. ಸಿ. ಎನ್. ಆರ್. ರಾವ್ ರವರು ವಹಿಸಿದ್ದರು ಪ್ರಶಸ್ತಿ ಪಡೆದ ಪ್ರಾಧ್ಯಾಪಕರುಗಳಿಗೆ ದಾವಣಗೆರೆ ವಿಶ್ವ ವಿದ್ಯಾನಿಲಯದ ಕುಲಪತಿಗಳು, ಕುಲಸಚಿವರುಗಳು, ವಿವಿಧ ನಿಕಾಯಗಳ ಡೀನರುಗಳು, ವಿವಿಧ ವಿಭಾಗಗಳ ಅಧ್ಯಕ್ಷರುಗಳು ಮತ್ತು ಅಧ್ಯಾಪಕರ ಸಂಘ ಅಭಿನಂದಿಸಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top