ದಾವಣಗೆರೆ: ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆ ಹಾಗೂ ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತಶ್ರಯದಲ್ಲಿ ಸಪ್ಟೆಂಬರ್ 24 ರಂದು ಬೆಳಗ್ಗೆ 10ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ.
ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ನವರು ಕಾರ್ಯಕ್ರಮ ಉದ್ಘಾಟಿಸುವರು. ದಕ್ಷಿಣ ಕ್ಷೇತ್ರ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು, ಲೋಕಸಭಾ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಕ್ರೀಡಾ ಜ್ಯೋತಿ ಸ್ವೀಕಾರ ಮಾಡುವರು.
ಮುಖ್ಯ ಅತಿಥಿಗಳಾಗಿ ಚನ್ನಗಿರಿ ಶಾಸಕರಾದ ಬಸವರಾಜು ವಿ. ಶಿವಗಂಗಾ, ಹರಿಹರ ಕ್ಷೆತ್ರ ಬಿ.ಪಿ. ಹರೀಶ್, ಮಾಯಕೊಂಡ ಶಾಸಕರಾದ ಕೆ.ಎಸ್. ಬಸವಂತಪ್ಪ, ಜಗಳೂರು ಶಾಸಕರಾದ ಬಿ. ದೇವೇಂದ್ರಪ್ಪ, ಹೊನ್ನಾಳಿ ಶಾಸಕರಾದ ಶಾಂತನಗೌಡ ಡಿ.ಜಿ., ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಡಿ.ಎಸ್. ಅರುಣ್, ಕೆ. ಅಬ್ದುಲ್ ಜಬ್ದಾರ್, ಡಾ. ಧನಂಜಯ್ ಸರ್ಜಿ, ಚಿದಾನಂದ ಎಂ. ಗೌಡ, ಕೆ.ಎಸ್. ನವೀನ್, ಮಹಾಪೌರರಾದ ವಿನಾಯಕ ಬಿ.ಹೆಚ್, ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ. ಶೆಟ್ಟಿ, ಮಹಾನಗರ ಪಾಲಿಕೆ ಸದಸ್ಯರಾದ ಎಸ್.ಟಿ.ವೀರೇಶ್, ಗಡಿಗುಡಾಳ್ ಮಂಜುನಾಥ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ, ಪೆÇಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸುರೇಶ ಬಿ. ಇಟ್ನಾಳ್, ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ ಹಾಗೂ ಇನ್ನಿತರರು ಭಾಗವಹಿಸುವರು.