ದಾವಣಗೆರೆ: ವಾಲ್ಮೀಕಿಯ(Valmiki) ಶ್ರೀರಾಮನೇ (Rama) ಬೇರೆ, ಅಯೋಧ್ಯಯ (Ayodhya) ಶ್ರೀರಾಮನೇ ಬೇರೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅಭಿಪ್ರಾಯಪಟ್ಟಿದ್ದಾರೆ.
ಹರಿಹರದ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿ, ಅಯೋಧ್ಯಯ ರಾಮ ಹಾಗೂ ವಾಲ್ಮೀಕಿಯ ರಾಮರಾಜ್ಯದ ಪರಿಕಲ್ಪನೆಯ ನಡುವೆ ವ್ಯತ್ಯಾಸಗಳಿವೆ.ವಾಲ್ಮೀಕಿಯಿಂದ ಶ್ರೀರಾಮನೋ, ಶ್ರೀರಾಮನಿಂದ ವಾಲ್ಮೀಕಿಯೋ ಎಂಬ ಕುರಿತು ಚಿಂತನೆ ಮಾಡುವ ಅಗತ್ಯವಿದೆ ಎಂದರು.
ವಾಲ್ಮೀಕಿ ಶ್ರೀರಾಮನ ಸೃಷ್ಟಿಕರ್ತನಾಗುದ್ದು, ವಾಲ್ಮೀಕಿ ರಾಮಾಯಣದಲ್ಲಿ ಶ್ರೀರಾಮನಿಗೆ ಪಟ್ಟಾಭಿಷೇಕ ಮಾಡಿದಾಗ ಇಡೀ ಜಗತ್ತು ಸಂತೋಷಪಟ್ಟಿತ್ತು. ಪಟ್ಟಾಭಿಷೇಕ,ವನವಾಸಕ್ಕೆ ತೆರಳುವಾಗ ಶ್ರೀರಾಮ ಸ್ಥಿತಪ್ರಜ್ಞನಾಗಿದ್ದನು ಎಂದು ಹೇಳಿದರು.



