ದಾವಣಗೆರೆ: ಹರಿಹರದ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ನಟ ಸುದೀಪ್ ಬರುವುದು ವಿಳಂಬ ಆಗಿದ್ದಕ್ಕೆ ಅಭಿಮಾನಿಗಳ ಆಕ್ರೋಶಗೊಂಡು ಕೂಗಾಟ ನಡೆಸಿ, ಅಲ್ಲಿದ್ದ ಕುರ್ಚಿಗಳನ್ನು ಪೀಸ್ ಪೀಸ್ ಮಾಡಿದ್ದರು. ಇದೀಗ ನಟ ಸುದೀಪ್ ಸ್ಪಷ್ಟನೆ ನೀಡಿದ್ದು, ವಾಲ್ಮೀಕಿ ಜಾತ್ರೆಗೆ ಆಯೋಜಕರಿಂದ ಆಹ್ವಾನವಿರಲಿಲ್ಲ, ಒಪ್ಪಿಕೊಂಡ ಕಾರ್ಯಕ್ರಮ ತಪ್ಪಿಸಿದವನಲ್ಲ ಎಂದು ಟ್ವಿಟ್ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಭಾಷಣ ಶುರು ಮಾಡುತ್ತಿದ್ದಂತೆ ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದ ಸುದೀಪ್ ಅಭಿಮಾನಿಗಳು, ಕೇಕೆ, ಚಪ್ಪಾಳೆ ಹೊಡೆಯುತ್ತಿದ್ದರು. ಕಿಚ್ಚ.. ಕಿಚ್ಚ ಅಂತ ಫ್ಯಾನ್ಸ್ ಕೂಗಲು ಆರಂಭಿಸಿದ್ರು. ಯಾರು ಹೇಳಿದರು ಕೇಳುವ ಪರಿಸ್ಥಿತಿಯಲ್ಲಿರಲಿಲ್ಲ. ಇದರಿಂದ ಬೇಸರಗೊಂಡ ಸ್ವಾಮೀಜಿ ನನ್ನ ಮಾತು ನೀವು ಕೇಳುತ್ತಿಲ್ಲ ಎಂದು ಹೇಳಿ ಸಿಟ್ಟಾಗಿ ಅರ್ಧಕ್ಕೆ ಮಾತು ನಿಲ್ಲಿಸಿ ಹೋದರು.
ಶಾಂತ ರೀತಿಯಿಂದ ವರ್ತಿಸಿ ಎಂದು ಹೇಳಿದ್ದರೂ ವೇದಿಕೆ ಮುಂದೆ ಅಳವಡಿಸಿದ್ದ ಬ್ಯಾರಿಕೇಡ್ ಅನ್ನು ಮುರಿದು ಮುಂಭಾಗಕ್ಕೆ ಬರಲು ಯತ್ನಿಸಿದರು. ಅಲ್ಲದೇ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗಾಗಿ ಹಾಕಲಾಗಿದ್ದ ಕುರ್ಚಿಗಳನ್ನು ಎತ್ತಿ ಬೀಸಾಡಿದ್ದಾರೆ. ಇದರಿಂದ ಕಾರ್ಯಕ್ರಮಕ್ಕೆ ತೀವ್ರ ಅಡ್ಡಿಯಾಯಿತು. ಹೀಗಾಗಿ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದರು. ನೂರಾರು ಕುರ್ಚಿಗಳು ಮುರಿದು ಹೋದವು.
ಸ್ನೇಹಿತರಿಗೆ ನಲ್ಮೆಯ ನಮಸ್ಕಾರ -ದಾವಣಗೆರೆಯ ಜಿಲ್ಲೆಯ ರಾಜನಹಳ್ಳಿಯ ಘಟನೆ ತಿಳಿದು ಬೇಸರವಾಯಿತು.ನನಗೆ ಕಾರ್ಯಕ್ರಮದ ಆಯೋಜಕರಿಂದ ಆಹ್ವಾನವಿರಲಿಲ್ಲ.ಕಾರ್ಯಕ್ರಮದ ಕುರಿತು ಮಾಹಿತಿಯೂ ಇರಲಿಲ್ಲ.ನಾನು ಒಪ್ಪಿಕೊಂಡ ಕಾರ್ಯಕ್ರಮಗಳನ್ನು ತಪ್ಪಿಸಿದವನಲ್ಲ.
Cont'd…— Kichcha Sudeepa (@KicchaSudeep) February 9, 2023
ಇನ್ನು ಈ ಬಗ್ಗೆ ನಟ ಸುದೀಪ್ ಅವರು ನನಗೆ ಕಾರ್ಯಕ್ರಮಕ್ಕೆ ಆಹ್ವಾನವೇ ನೀಡಿಲ್ಲ ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ. ರಾಜನಹಳ್ಳಿಯ ಘಟನೆ ತಿಳಿದು ನನಗೆ ಬೇಸರವಾಯಿತು. ಈ ಕಾರ್ಯಕ್ರಮದ ಆಯೋಜಕರಿಂದ ಯಾವುದೇ ಆಹ್ವಾನವಿರಲಿಲ್ಲ. ಇದರ ಬಗ್ಗೆ ಮಾಹಿತಿಯೂ ಇರಲಿಲ್ಲ. ನಾನು ಒಪ್ಪಿಕೊಂಡ ಕಾರ್ಯಕ್ರಮಗಳನ್ನು ತಪ್ಪಿಸಿದವನಲ್ಲ. ಘಟನೆಯಿಂದ ನನಗೆ ಬೇಸರವಾಗಿದೆ ಎಂದು ಹೇಳಿದ್ದಾರೆ.



