Connect with us

Dvgsuddi Kannada | online news portal | Kannada news online

ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಿಸದಿದ್ರೆ ಪ್ರತಿ ಗ್ರಾಮದಿಂದ ಹೋರಾಟ

ದಾವಣಗೆರೆ

ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಿಸದಿದ್ರೆ ಪ್ರತಿ ಗ್ರಾಮದಿಂದ ಹೋರಾಟ

ದಾವಣಗೆರೆ: ಪರಿಶಿಷ್ಟ ವರ್ಗಕ್ಕೆ ಈ ಬಾರಿ ಶೇ.7.5 ಮೀಸಲಾತಿ ನೀಡದಿದ್ದರೆ, ಪ್ರತಿ ಗ್ರಾಮದಿಂದ ಉಗ್ರ ಹೋರಾಟಕ್ಕೆ ವೇದಿಕೆ ಸಜ್ಜುಗೊಳಿಸಲು ವಾಲ್ಮೀಕಿ ಸಮುದಾಯದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.

ಹರಿಹರದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಸಂಸ್ಥಾಪಕರಾದ ಪುಣ್ಯಾನಂದಪುರಿ ಸ್ವಾಮೀಜಿಯವರು 14ನೇ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ವಿವಿಧ ಜಿಲ್ಲೆಗಳಿಂದ ಆಗಮಿಸಿದ ವಾಲ್ಮೀಕಿ ದರ್ಮದರ್ಶಿಗಳು, ಪ್ರಮುಖ ಮುಖಂಡರ ಸಭೆಯಲ್ಲಿ ಭಾಗಿಯಾಗಿದ್ರು.

ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ನಮ್ಮ ಸಮುದಾಯದ ನಾಯಕರಿಗೆ ಮೊದಲು ಬುದ್ದಿ ಬರಬೇಕು. ಒಬ್ಬರಿಗೂ ಚಳವಳಿಯ ಬಗ್ಗೆ, ಸಮುದಾಯದ ಹಿತದ ಬಗ್ಗೆ ಕಾಳಜಿ ಇಲ್ಲ. ನಾನೇ ಹಲವು ಬಾರಿ ವಿಧಾನ ಸೌಧದ ಮೆಟ್ಟಿಲು ಹತ್ತಿದರೂ ಸ್ಪಂದಿಸುತ್ತಿಲ್ಲ. ಸಮಾಜಕ್ಕೆ ಸ್ಪಷ್ಟ ಸಂದೇಶ ನೀಡುತ್ತಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಒತ್ತಡ ಹೇರಲು ಮುಂದಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತ್ಪರಿಶಿಷ್ಟ ವರ್ಗದ ಮೀಸಲಾತಿ ಪ್ರಮಾಣ ಹೆಚ್ಚಿಸಲು ಆಗ್ರಹಿಸಿ 30 ವರ್ಷದಿಂದ ಹೋರಾಟ ನಢಯುತ್ತಿದೆ. ನಾನು ಪಾದಯಾತ್ರೆ ಮಾಡಿದೆ. ಫ್ರೀಡಂ ಪಾರ್ಕ್ ನಲ್ಲಿ ಧರಣಿ ಕುಳಿತೆ. ಆದರೆ ನಮ್ಮವರೇ ನಾಯಕರು ಭರವಸೆ ನೀಡಿ ಹೋರಾಟ ಹಿಂಪಡೆಯುವಂತೆ ಮಾಡಿದರು. ಮೀಸಲಾತಿ ವಿಚಾರವನ್ನು ತ್ರಿ ಸದಸ್ಯ ಸಮಿತಿ ವ್ಯಾಪ್ತಿಯಿಂದ ಹೊರಗಿಡಲು ಒತ್ತಡ ಹೇರಲು ಎಲ್ಲ ಶಾಸಕರಿಗೂ ಹಲವು ಸಭೆಗಳಲ್ಲಿ ಹೇಳಿದ್ದೇವೆ. ಆದರೆ ನಮ್ಮವರೇ ಸಮುದಾಯದ ಪರವಾದ ಬದ್ಧತೆ ಪ್ರದರ್ಶಿಸುತ್ತಿಲ್ಲ ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top