Connect with us

Dvgsuddi Kannada | online news portal | Kannada news online

ದಾವಣಗೆರೆ: ಜು.1ರಿಂದ 7ರವರೆಗೆ ವನಮಹೋತ್ಸವ ; ಶಾಲಾ-ಕಾಲೇಜ್, ಸರ್ಕಾರಿ, ಅರೆ ಸರ್ಕಾರಿ, ಸಂಘ, ಸಂಸ್ಥೆಗಳು ಭಾಗವಹಿಸುಂತೆ ಮನವಿ

ದಾವಣಗೆರೆ

ದಾವಣಗೆರೆ: ಜು.1ರಿಂದ 7ರವರೆಗೆ ವನಮಹೋತ್ಸವ ; ಶಾಲಾ-ಕಾಲೇಜ್, ಸರ್ಕಾರಿ, ಅರೆ ಸರ್ಕಾರಿ, ಸಂಘ, ಸಂಸ್ಥೆಗಳು ಭಾಗವಹಿಸುಂತೆ ಮನವಿ

ದಾವಣಗೆರೆ: ಸಾರ್ವಜನಿಕರ, ಸಂಘ-ಸಂಸ್ಥೆಗಳ, ರೈತರ ಸಹಭಾಗಿತ್ವದೊಂದಿಗೆ ಜುಲೈ 1 ರಿಂದ 7 ರವರೆಗೆ ನಡೆಯುವ ವನಮಹೋತ್ಸವದ ಅಂಗವಾಗಿ ಅರಣ್ಯೇತರ ಪ್ರದೇಶಗಳಲ್ಲಿ ಸಸಿ ನೆಡುವ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದೆ.

ಅರಣ್ಯೇತರ ಸರ್ಕಾರಿ ಸ್ಥಳಗಳು, ರಸ್ತೆ ಬದಿ, ಶೈಕ್ಷಣಿಕ ಸಂಸ್ಥೆಗಳ ಆವರಣ, ಆಸ್ಪತ್ರೆಗಳ ಆವರಣ, ಕೈಗಾರಿಕಾ ಪ್ರದೇಶಗಳ ಆವರಣ, ಧಾರ್ಮಿಕ ಸಂಘ-ಸಂಸ್ಥೆಗಳ ಆವರಣ, ವಿಶ್ವವಿದ್ಯಾಲಯಗಳ ಆವರಣ, ಸರ್ಕಾರಿ ಇಲಾಖೆಗಳ ಆವರಣ, ರೈತರ ಜಮೀನುಗಳು ಮತ್ತು ಜಮೀನುಗಳ ಬದುಗಳು ಹಾಗೂ ಕೆರೆ ಅಂಗಳಗಳು ಇತ್ಯಾದಿ ಪ್ರದೇಶಗಳಲ್ಲಿ ಸ್ಥಳೀಯ ಜಾತಿಯ ಗಿಡಗಳನ್ನು ವ್ಯಾಪಕವಾಗಿ ಬೆಳೆಸಲು ಎಲ್ಲಾ ಸರ್ಕಾರಿ ಇಲಾಖೆಗಳು, ಸ್ಥಳೀಯ ಸಂಸ್ಥೆಗಳಾದ ಪಂಚಾಯಿತಿಗಳು, ನಗರಸಭೆಗಳು, ನಗರಪಾಲಿಕೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪರಿಸರ ಸಂಘಟನೆಗಳು ಹಾಗೂ ಇತರೆ ಆಸಕ್ತ ಸರ್ಕಾರೇತರ ಸಂಘ-ಸಂಸ್ಥೆಗಳನ್ನು ಸಕ್ರಿಯವಾಗಿ ತೊಡಗಿಸಿಕೊಂಡು ರಾಜ್ಯಾದ್ಯಂತ ಸಸಿ ನೆಡುವ ಕಾರ್ಯಕ್ರವನ್ನು ಅನುಷ್ಠಾನಗೊಳಿಸಲಾಗಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸುವ ಆಸಕ್ತರು ದಾವಣಗೆರೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು- 08192-262527, 9449632508, ದಾವಣಗೆರೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ತಾಂತ್ರಿಕ ಸಹಾಯಕರು-9481179049/9481991702, ವಲಯ ಅರಣ್ಯಾಧಿಕಾರಿ, ದಾವಣಗೆರೆ ವಲಯ ಅರಣ್ಯಾಧಿಕಾರಿ 9448766626/9481991703, ಜಗಳೂರು ವಲಯ ಅರಣ್ಯಾಧಿಕಾರಿ 9739657275/9481991705, ಹೊಸಕೆರೆ ರಂಗಯ್ಯನದುರ್ಗ ವನ್ಯಜೀವಿ ವಲಯ ಅರಣ್ಯಾಧಿಕಾರಿ-9620393451/9481991706, ಹೊನ್ನಾಳಿ ವಲಯ ಅರಣ್ಯಾಧಿಕಾರಿ 872291012/9481991704 ಅರಣ್ಯ ಇಲಾಖಾ ಕಚೇರಿಯನ್ನು ಸಂಪರ್ಕಿಸಲು ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಹೆಚ್.ಜಗನ್ನಾಥ್ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top