ದಾವಣಗೆರೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಅಲೆಮಾರಿ ಅಭಿವೃದ್ಧಿ ನಿಗಮ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ: ಈ ಏರಿಯಾದಲ್ಲಿ ಸಂ.4ಗಂಟೆ ವರೆಗೆ ವಿದ್ಯುತ್ ವ್ಯತ್ಯಯ
ಈ ಯೋಜನೆ ನಿವೇಶನ ಹೊಂದಿದ ಮತ್ತು ವಸತಿ ರಹಿತವಾಗಿ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರಿಗೆ ನಿಗಮದಿಂದ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಾಣ ಮಾಡಿಕೊಡಲು ದಾವಣಗೆರೆ ಜಿಲ್ಲೆಯ ಪರಿಶಿಷ್ಟ ಜಾತಿಯ ಸಮುದಾಯದವರಿಗೆ 150 ಹಾಗೂ ಪರಿಶಿಷ್ಟ ಪಂಗಡದವರಿಗೆ 50 ಸೇರಿ ಒಟ್ಟು 200 ಮನೆಗಳ ಹಂಚಿಕೆಗೆ ನಿಗದಿ ಮಾಡಲಾಗಿದೆ.
ದಾವಣಗೆರೆ: ಮರ ಕಡಿಯುವ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಜಗಳ; ವ್ಯಕ್ತಿ ಕೊಲೆಯಲ್ಲಿ ಅಂತ್ಯ..!
ದಾವಣಗೆರೆ ಜಿಲ್ಲೆ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಬರುವ ಟೆಂಟು / ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದವರು ನಿವೇಶನ ಹೊಂದಿರುವ ಬಗ್ಗೆ ಹಕ್ಕು ಪತ್ರ, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ -2, ಆರ್.ಡಿ. ಸಂಖ್ಯೆ ಹೊಂದಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಬುಕ್ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಅರ್ಜಿಯನ್ನು ಜೂನ್ 12 ಸಂಜೆ 5:30 ಗಂಟೆಯೊಳಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ,ಕೊಠಡಿ ಸಂಖ್ಯೆ 37, ಮೊದಲನೇ ಮಹಡಿ, ಬಿ ಬ್ಲಾಕ್, ಪಿ.ಬಿ.ರಸ್ತೆ, ದಾವಣಗೆರೆ ಇವರಿಗೆ ಸಲ್ಲಿಸುವಂತೆ ಇಲಾಖೆಯ ಉಪ ನಿರ್ದೇಶಕರಿಗೆ ತಿಳಿಸಿದ್ದಾರೆ.


