ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ 24ನೇ ಮಹಾ ಅಧಿವೇಶನವು ದಾವಣಗೆರೆಯಲ್ಲಿ ಡಿಸೆಂಬರ್ನಲ್ಲಿ ನಡೆಯಲಿದ್ದು, ಇದರ ಪೂರ್ವಭಾವಿ ಸಭೆ ನಗರದ ಎಂಬಿಎ ಕಾಲೇಜು ಆವರಣದಲ್ಲಿಂದು ಮಧ್ಯಾಹ್ನ 12.30ಕ್ಕೆ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.
ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ, ರಾಷ್ಟ್ರೀಯ ಉಪಾಧ್ಯಕ್ಷರಾದ ಎನ್.ತಿಪ್ಪಣ್ಣ, ಅಥಣಿ ವೀರಣ್ಣ, ಎಸ್.ಎಸ್.ಗಣೇಶ್, ಅಣಬೇರು ರಾಜಣ್ಣ, ವಿನಯ್ ಕುಲಕರ್ಣಿ, ಪ್ರಭಾಕರ್ ಕೋರೆ, ರಾಷ್ಟ್ರೀಯ ಕಾರ್ಯದರ್ಶಿ ರೇಣುಕಾ ಪ್ರಸನ್ನ ಭಾಗವಹಿಸುವರು ಎಂದು ಜಿಲ್ಲಾಧ್ಯಕ್ಷ ಶಿವಕುಮಾರ್ ದೇವರಮನಿ ತಿಳಿಸಿದ್ದಾರೆ.



