ದಾವಣಗೆರೆ: ದಾವಣಗೆರೆ ನಗರದಲ್ಲಿ ವಿಶ್ವ ಹಿಂದೂ ಪರಿಷತ್ತು, ಸಾರ್ವಜನಿಕ ವಿಜಯದಶಮಿ ಸಮಿತಿ ವತಿಯಿಂದ ಅ. 02ರಂದು ನರದಲ್ಲಿ ವಿಜಯದಶಮಿ ಶೋಭಾಯಾತ್ರೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.ನಗರದ ವೆಂಕಟೇಶ್ವರ ವೃತ್ತದಿಂದ ಶೋಭಾಯಾತ್ರೆಗೆ ಚಾಲನೆ ಸಿಗಲಿದೆ.
ಬಿಗಿ ಪೊಲೀಸ್ ಬಂದೋಬಸ್ತ್
ವಿಜಯದಶಮಿ ಶೋಭಾಯಾತ್ರೆಗೆ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಲ್ಲಿ ಕಾನೂನು & ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳನ್ನು ಹಾಗು ಕೆ.ಎಸ್.ಆರ್.ಪಿ ತುಕಡಿಗಳನ್ನು & ಡಿಎಆರ್ ತುಕಡಿಗಳು, ಕ್ಯೂ.ಆರ್.ಟಿ ತಂಡಗಳು, ದುರ್ಗಾಪಡೆ, ಅಲ್ಲದೇ ಹೋಮ್ ಗಾರ್ಡ್ ಸಿಬ್ಬಂದಿಗಳನ್ನು ನಿಯೋಜಿಸಿದೆ. ಮೆರವಣಿಗೆ ಉದ್ದಕ್ಕೂ 200 ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ, ಮೆರವಣಿಗೆಯ ಸಂಪೂರ್ಣ ಚಿತ್ರಿಕರಣಕ್ಕೆ ಹೆಚ್ಚಿನ ವಿಡಿಯೋಗ್ರಾರ್ಸ್ಗಳನ್ನು ನಿಯೋಜಿಸಲಾಗಿರುತ್ತದೆ. ಅಲ್ಲದೇ ಮೆರವಣಿಗೆಯ ಉದ್ದಕ್ಕೂ ಡ್ರೋನ್ ಕಣ್ಗಾವಲು ಇರಿಸಲಾಗಿರುತ್ತದೆ, ಒಟ್ಟಾರೆಯಾಗಿ ಕಾನೂನು & ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿರುತ್ತದೆ.
ಶೋಭಾಯಾತ್ರೆ ಸಮಯದಲ್ಲಿ ಈ ಕೆಳಕಂಡ ಅಂಶಗಳನ್ನು ಪಾಲಿಸಲು ಆಯೋಜಕರಿಗೆ ಹಾಗೂ ಸಾರ್ವಜನಿಕರಿಗೂ ಈ ಮೂಲಕ ತಿಳಿಸಲಾಗಿದೆ.
- 1. ವಿಜಯದಶಮಿ ಮೆರವಣಿಗೆಯನ್ನು ಈಗಾಗಲೇ ನಿಗಧಿಪಡಿಸಿದ ಮಾರ್ಗಗಳಲ್ಲಿಯೇ ಸಾಗುವುದು ಹಾಗೂ ಯಾವುದೇ ಕಾರಣಕ್ಕೂ ಮಾರ್ಗ ಬದಲಾವಣೆಗೆ ಅವಕಾಶವಿರುವುದಿಲ್ಲ
- 2. ವಿಜಯದಶಮಿ ಮೆರವಣಿಗೆಯ ಸಮಯದಲ್ಲಿ ಯಾವುದೇ ಜೀವ ಹಾನಿಯಾಗದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು
- 3. ವಿಜಯದಶಮಿ ಮೆರವಣಿಗೆ ಸಂಧರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆ ತರುವಂತಹವರ ಮತ್ತು ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ಧಕ್ಷಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು
- 4. ವಿಜಯದಶಮಿ ಮೆರವಣಿಗೆ ಸಮಯದಲ್ಲಿ ಪ್ರಚೋಧನಕಾರಿ ಹಾಡುಗಳನ್ನು ಹಾಕುವುದು, ಪೋಸ್ಟರ್ಗಳನ್ನು ಪ್ರದರ್ಶಿಸುವುದಕ್ಕೆ ಅವಕಾಶ ಇರುವುದಿಲ್ಲ. ಈ ಬಗ್ಗೆ ಆಯೋಜಕರು ವಿಶೇಷ ಗಮನ ಹರಿಸುವುದು & ಸೂಕ್ತ ಕ್ರಮ ಕೈಗೊಳ್ಳುವುದು
- 5. ಸಾರ್ವಜನಿಕ/ಜನ ಸಂದಣಿ ಪ್ರದೇಶಗಳಲ್ಲಿ ಪಟಾಕಿಗಳನ್ನು ಸಿಡಿಸಬಾರದು. ಸುರಕ್ಷಿತ ಕ್ರಮಗಳನ್ನು ಅನುಸರಿಸುವುದು
- 6. ವಿಜಯದಶಮಿ ಮೆರವಣಿಗೆ ಸಂಧರ್ಭದಲ್ಲಿ ಮಾದಕ ವಸ್ತು ಸೇವನೆೆ, ಮದ್ಯ ಸೇವನೆ ಮಾಡಬಾರದು ಈ ಬಗ್ಗೆ ಆಯೋಜಕರು ವಿಶೇಷ ಗಮನ ಹರಿಸುವುದು & ಸೂಕ್ತ ಕ್ರಮ ಕೈಗೊಳ್ಳುವುದು
- 7. ಸಾರ್ವಜನಿಕ ಸಂಚಾರ ವ್ಯವಸ್ಥೆಗೆ ತೊಂದರೆಯಾಗದAತೆ ವಿಜಯದಶಮಿ ಮೆರವಣಿಗೆಯನ್ನು ನಡೆಸುವುದು
- 8. ವಿಜಯದಶಮಿ ಮೆರವಣಿಗೆ ಸಮಯದಲ್ಲಿ ಯಾವುದೇ ವಿದ್ಯುತ್ ಅವಘಡಗಳಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು..ಮೆರವಣಿಗೆ ಮಾರ್ಗಗಳಲ್ಲಿ ಬೆಳಕಿನ ವ್ಯವಸ್ಥೆಗೆ ಜನರೇಟರ್ ಗಳನ್ನು ಅಳವಡಿಸಿಕೊಳ್ಳುವುದು
- 9. ವಿಜಯದಶಮಿ ಮೆರವಣಿಗೆ ಮಾರ್ಗಗಳ ಸೂಕ್ಷ್ಮ ಪ್ರದೇಶಗಳಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳುವುದು
- 10. ವಿಜಯದಶಮಿ ಮೆರವಣಿಗೆ ಸಂಬAಧ ಈಗಾಗಲೇ ರೌಡಿ ಮತ್ತು ಮತೀಯ ಗೂಂಡಗಳ ಮೇಲೆ ಮುಂಜಾಗೃತ ಕ್ರಮಗಳನ್ನು ಕೈಗೊಂಡು ನಿಗಾ ಇರಿಸಲಾಗಿರುತ್ತದೆ
- 11. ವಿಜಯದಶಮಿ ಮೆರವಣಿಗೆಯಲ್ಲಿ ಕರ್ಕಶವಾದ ಶಬ್ಧವನ್ನುಂಟು ಮಾಡುವ ದ್ವನಿ ವರ್ಧಕಗಳನ್ನು ಉಪಯೋಗಿಸಬಾರದು, ಏಕೆಂದರೆ ಮಾನ್ಯ ಘನ ನ್ಯಾಯಲಯವು ಕರ್ಕಶವಾದ ಶಬ್ಧವನ್ನುಂಟು ಮಾಡುವ ದ್ವನಿ ವರ್ಧಕಗಳನ್ನು ನಿಷೇಧಿಸಿದ್ದು, ಉಲ್ಲಂಘಿಸಿದ್ದಲ್ಲಿ ಕಾನೂನು ರಿತ್ಯಾ ಕ್ರಮ ಕೈಗೊಳ್ಳಲಾಗುವುದು
- 12. ವಿಜಯದಶಮಿ ಮೆರವಣಿಗೆ ಮಾಡುವಾಗ ಸಾರ್ವಜನಿಕ ಆಸ್ತಿ, ಜೀವ ಹಾನಿಯಾಗದಂತೆ ಮುಂಜಾಗೃತ ಕ್ರಮಗಳನ್ನು ಅನುಸರಿಸಬೇಕು ಹಾಗೂ ತುರ್ತು ಚಿಕಿತ್ಸಾ ವ್ಯವಸ್ಥೆ ಬಗ್ಗೆ ಆಯೋಜಕರು ನಿಯೋಜಿಸಿಕೊಳ್ಳುವುದು
- 13. ವಿಜಯದಶಮಿ ಮೆರವಣಿಗೆ ಮಾರ್ಗಗಳಲ್ಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಸೇವಕರನ್ನು ನೇಮಿಸುವುದು ಈ ಬಗ್ಗೆ ಸ್ಥಳೀಯ ಠಾಣೆಗೆ ಮಾಹಿತಿ ನೀಡುವುದು
- 14. ಸಾಮಾಜಿಕ ಜಾಲತಾಣಗಳಲ್ಲಿ ಕೋಮುಪ್ರಚೋದಕ ಹಾಗೂ ಧಾರ್ಮಿಕ ನಿಂದನೆ, ಸುಳ್ಳುಸುದ್ದಿ ಹರಡುವುದು, ಕಾನೂನು ಸುವ್ಯವಸ್ಥೆಗೆ ದಕ್ಕೆ ಬರುವಂತಹ ಪೋಸ್ಟ್ಗಳನ್ನು ಹಾಕುವುದಾಗಲೀ ಹಾಗು ಶೇರ್ ಮಾಡುವುದಾಗಲೀ ಕಂಡು ಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಾಲಾಗುವುದು
- 15. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೇ ಶಾಂತಿಯುತವಾಗಿ ಹಾಗೂ ಸೌಹಾರ್ಧಯುತವಾಗಿ ಹಬ್ಬವನ್ನು ಆಚರಿಸುವುದು, ಯಾವುದೇ ಅಹಿತಕರ ಘಟನೆಗಳು ಕಂಡುಬAದರೆ ತುರ್ತು ಸಹಾಯವಣಿ 112 ಗೆ ಕರೆ ಮಾಡುವುದು ಹಾಗೂ ಸ್ಥಳೀಯ ಪೊಲೀಸ್ ಠಾಣೆ/ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಮಾಹಿತಿ ನೀಡಲು ಕೋರಲಾಗಿದೆ
- 16. ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆಯದೇ ಯಾವುದೇ ಬ್ಯಾನರ್ & ಬಂಟಿಗ್ಸ್ಗಳನ್ನು ಹಾಕಬಾರದು ಹಾಗೂ ಈಗಾಗಲೇ ಹಾಕಿರುವ ಬಂಟಿAಗ್ಸ್ ಬ್ಯಾರ್ಸ್, ಟ್ಯಾಬ್ಲೆ ಗಳ ಸುರಕ್ಷತೆ ಬಗ್ಗೆ ಆಯೋಜಕರು ಸ್ವಯಂ ಸೇವಕರನ್ನು ನೇಮಿಸಿಕೊಳ್ಳುವುದು
- 17. ಮಹಿಳೆಯರು/ಯುವತಿಯರನ್ನು ಚುಡಾಯಿಸುವುದು, ಕಿಚಾಯಿಸುವುದು ಕಂಡುಬAದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು
- 18. ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದು. ದ್ವಿಚಕ್ರ ವಾಹನಗಳಲ್ಲಿ 2 ಕ್ಕಿಂತ ಹೆಚ್ಚಿನ ಸವಾರರನ್ನು ಕೂರಿಸಿಕೊಂಡು ಓಡಿಸುವುದು, ಕರ್ಕಶವಾದ ಹಾರ್ನಗಳನ್ನು, ಸೈಲೆನ್ಸರ್ ಗಳನ್ನು ಬಳಸುವುದು ಕಂಡುಬಂದರೆ ಅಂತಹ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಹಾಗೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು