Connect with us

Dvgsuddi Kannada | online news portal | Kannada news online

ಗ್ಯಾರಂಟಿ ಕಾರ್ಡ್ ವಿತರಿಸುವ ಕಾಂಗ್ರೆಸ್ 70 ವರ್ಷ ಕಡುಬು ತಿನ್ನುತ್ತಿದ್ದರಾ..? ; ಮಾಜಿ ಸಿಎಂ ಯಡಿಯೂರಪ್ಪ ದಾವಣಗೆರೆಯಲ್ಲಿ ಕಿಡಿ

n4837359081679752507356392514b4dca4ad6fe90acf5e8f1442bea1675d0f256f0cce29b11474b166a972

ಪ್ರಮುಖ ಸುದ್ದಿ

ಗ್ಯಾರಂಟಿ ಕಾರ್ಡ್ ವಿತರಿಸುವ ಕಾಂಗ್ರೆಸ್ 70 ವರ್ಷ ಕಡುಬು ತಿನ್ನುತ್ತಿದ್ದರಾ..? ; ಮಾಜಿ ಸಿಎಂ ಯಡಿಯೂರಪ್ಪ ದಾವಣಗೆರೆಯಲ್ಲಿ ಕಿಡಿ

ದಾವಣಗೆರೆ: ಈಗ ಜನರಿಗೆ ಗ್ಯಾರಂಟಿ ಕಾರ್ಡ್ ವಿತರಿಸುವ ಕಾಂಗ್ರೆಸ್, 7೦ ವರ್ಷ ಅಧಿಕಾರದಲ್ಲಿದ್ದಾಗ ಕಡುಬು ತಿನ್ನುತ್ತಿದ್ದರಾ..? ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದರು.

ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಕಾಂಗ್ರೆಸ್ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ. ಹಣ, ಹೆಂಡದ ಬಲದಿಂದ ಚುನಾವಣೆಗೆ ಗೆಲ್ಲೋದಕ್ಕೆ ಆಗಲ್ಲ. ರಾಜ್ಯದಲ್ಲಿ ಬಿಜೆಪಿ ಪರ ಜನರ ಅಲೆ ಇದೆ. ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ವಿಜಯಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಇದು ಸಮಾರೋಪ ಯಾತ್ರೆಯಲ್ಲ,‌ ವಿಜಯಯಾತ್ರೆ ಆರಂಭ ಎಂದರು. ‌

ಪ್ರಧಾನಿ ಮೋದಿಯವರನ್ನು ಇಡೀ ಜಗತ್ತೇ ಮೆಚ್ಚಿದೆ. ಮೋದಿ ಅವರು ಪ್ರಧಾನಿಯಾದ ಬಳಿಕ ಒಂದು ದಿನವೂ ವಿಶ್ರಾಂತಿ ತೆಗೆದುಕೊಂಡಿಲ್ಲ. ಅವರ ಶ್ರಮಕ್ಕೆ ಪ್ರತಿಫಲ ಸಿಗಬೇಕಾದ್ರೆ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕಿದೆ. ನನಗೆ 80 ವರ್ಷ, ಈ ಚುನಾವಣೆ ಮುಗಿಯೋವರೆಗೂ ನಾನು ಮನೆಯಲ್ಲಿ ರೆಸ್ಟ್ ಮಾಡಲ್ಲ. ಬಿಜೆಪಿ ಕಾರ್ಯಕರ್ತರು ಕೂಡ ಸರ್ಕಾರದ ಯೋಜನೆಗಳನ್ನು ಮನೆ ಮನಗೆ ತಲುಪಿಸುವ‌ ಮೂಲಕ ಕರ್ನಾಟಕದಲ್ಲಿ ಬಹುಮತ ಸರ್ಕಾರ ರಚನೆ ಮಾಡಲು ಶ್ರಮಿಸಬೇಕು ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top