Connect with us

Dvgsuddi Kannada | online news portal | Kannada news online

ದಾವಣಗೆರೆ: ಚೇತನ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜುಗಳಿಗೆ ಹೊಸ ದಾಖಲಾತಿ ಮಾಡಿಕೊಳ್ಳದಂತೆ ನ್ಯಾಯಾಲಯ ಆದೇಶ

ದಾವಣಗೆರೆ

ದಾವಣಗೆರೆ: ಚೇತನ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜುಗಳಿಗೆ ಹೊಸ ದಾಖಲಾತಿ ಮಾಡಿಕೊಳ್ಳದಂತೆ ನ್ಯಾಯಾಲಯ ಆದೇಶ

ದಾವಣಗೆರೆ: ಕರ್ನಾಟಕ ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಚೇತನ ಶಿಕ್ಷಣ ಸಂಸ್ಥೆ  ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಹೊಸ ದಾಖಲಾತಿ ಮಾಡಿಕೊಳ್ಳದಂತೆ ನ್ಯಾಯಾಲಯದ ಆದೇಶ ನೀಡಿದೆ.

ಬಿಐಇಟಿ ಕಾಲೇಜು ರಸ್ತೆ ಯ ಶ್ರೀ ವೈಷ್ಣವಿ ಚೇತನ ಪದವಿಪೂರ್ವ ಕಾಲೇಜು, ಆಂಜನೇಯ ಬಡಾವಣೆ   ಶ್ರೀ ವೈಷ್ಣವಿ ಚೇತನ ಪದವಿಪೂರ್ವ ಕಾಲೇಜು, ಹರಿಹರದ  ಶ್ರೀ ವಿಜಯ ಚೇತನ ಪದವಿಪೂರ್ವ ಕಾಲೇಜಿನಲ್ಲಿ ಹೊಸ ದಾಖಲಾತಿ ಮಾಡಿಕೊಳ್ಳದಂತೆ ನ್ಯಾಯಾಲಯ ಆದೇಶದಲ್ಲಿ ಉಲ್ಲೇಖಿಸಿದೆ.

ಈ 03 ಕಾಲೇಜುಗಳಲ್ಲಿ ಈಗಾಗಲೇ 2020-21 ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಗೆ ದಾಖಲಾತಿ ಹೊಂದಿರುವವರನ್ನು (ಕ್ರಮವಾಗಿ 320, 275, 00 ವಿದ್ಯಾರ್ಥಿಗಳನ್ನು) ಮಾತ್ರ ಮುಂದುವರೆಸಬಹುದಾಗಿರುತ್ತದೆ.ಈ ಮಾಹಿತಿಯನ್ನು ಈ ಮೂಲಕ ವಿದ್ಯಾರ್ಥಿಗಳ/ ಪೋಷಕರ / ಕಾಲೇಜಿನ ಪ್ರಾಚಾರ್ಯರ ಹಾಗೂ ಆಡಳಿತ ಮಂಡಳಿಯ ಗಮನಕ್ಕೆ ತರಲಾಗಿದೆ. ಈ ಸೂಚನೆಯನ್ನು ಪಾಲಿಸದಿದ್ದಲ್ಲಿ ಮುಂದಿನ ಆಗು ಹೋಗುಗಳಿಗೆ ಇಲಾಖೆಯು ಜವಾಬ್ದಾರಿಯಲ್ಲ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top