ದಾವಣಗೆರೆ: ಬೇಸಿಗೆ ಸಮಯವಾಗಿರುವುದರಿಂದ ವಿದ್ಯುತ್ನ ಹೆಚ್ಚಿನ ಬೇಡಿಕೆ ಇರುವುದರಿಂದ, ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಹರಿಹರಕ್ಕೆ ತುಂಗಭದ್ರಾ ನದಿಯಿಂದ ನೀರು ಸರಬರಾಜು ಮಾಡಲಾಗುತ್ತಿರುವ ಕವಲೆತ್ತು ಗ್ರಾಮದ ಹತ್ತಿರವಿರುವ ಜಾಕ್ವೆಲ್ ಪಂಪ್ಹೌಸ್ನಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ಅಡಚಣೆಯಾಗುತ್ತಿದೆ. ನಿರಂತರ ಕುಡಿಯುವ ನೀರು ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ.
ನಗರದ ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ನೀರಿನ ಬೇಡಿಕೆ ಹೆಚ್ಚಾಗುವುದರಿಂದ ಸಾಧ್ಯವಾದಷ್ಟು ಶುದ್ದೀಕರಿಸಿದ ನೀರನ್ನು ಅಗತ್ಯಕ್ಕೆ ತಕ್ಕಂತೆ ಸಂಗ್ರಹಣೆ ಮಾಡಿಕೊಳ್ಳಬೇಕೆಂದು ಹರಿಹರ ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ.



