ಡಿವಿಜಿ ಸುದ್ದಿ, ದಾವಣಗೆರೆ: 2020-21 ನೇ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೆಲಮಟ್ಟಕ್ಕಿಂತ ಮೇಲೆ (ಅಬವ್ ಗ್ರೌಂಡ್ ಲೆವೆಲ್-ಸ್ಟೀಲ್ ಟ್ಯಾಂಕ್) ರಚಿಸುವ ನೀರು ಸಂಗ್ರಹಣಾ ಘಟಕಗಳ ಸ್ಥಾಪನೆಗೆ ರೈತರಿಂದ ಅರ್ಜಿ ಆಹ್ವಾನಿಸಿದೆ.
ಜಿಲ್ಲೆಗೆ 8 ಭೌತಿಕ ಘಟಕ ಸ್ಥಾಪನೆ ಮಾಡಲು ಆರ್ಥಿಕ ರೂ.27.75 ಲಕ್ಷಗಳ ಸಹಾಯ ಧನ ಬಂದಿದ್ದು,ಆಸಕ್ತ ರೈತರು ಅರ್ಜಿಸಲ್ಲಿಸಬಹುದು. ಒಂದು ಲಕ್ಷ ಲೀಟರ್ ಮತ್ತು 2 ಲಕ್ಷ ಲೀಟರ್ ಸಾಮರ್ಥ್ಯದ ಘಟಕ ನಿರ್ಮಾಣಕ್ಕೆ ಕ್ರಮವಾಗಿ ರೂ.3.25 ಹಾಗೂ ರೂ. 5.00 ಲಕ್ಷ ಸಹಾಯಧನ ಲಭ್ಯವಿದೆ.
ಆಸಕ್ತಿಯುಳ್ಳ ತೋಟಗಾರಿಕೆ ಬೆಳೆ ಬೆಳೆಯುತ್ತಿರುವ ರೈತರು ಸಂಬಂಧಪಟ್ಟ ತಾಲ್ಲೂಕುಗಳ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದೆಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



