Connect with us

Dvgsuddi Kannada | online news portal | Kannada news online

ದಾವಣಗೆರೆ: ನೀರು ಸಂಗ್ರಹಣಾ ಘಟಕ ಸ್ಥಾಪನೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ನೀರು ಸಂಗ್ರಹಣಾ ಘಟಕ ಸ್ಥಾಪನೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಡಿವಿಜಿ ಸುದ್ದಿ, ದಾವಣಗೆರೆ:  2020-21 ನೇ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೆಲಮಟ್ಟಕ್ಕಿಂತ ಮೇಲೆ (ಅಬವ್ ಗ್ರೌಂಡ್ ಲೆವೆಲ್-ಸ್ಟೀಲ್ ಟ್ಯಾಂಕ್) ರಚಿಸುವ ನೀರು ಸಂಗ್ರಹಣಾ ಘಟಕಗಳ ಸ್ಥಾಪನೆಗೆ ರೈತರಿಂದ ಅರ್ಜಿ ಆಹ್ವಾನಿಸಿದೆ.

ಜಿಲ್ಲೆಗೆ  8 ಭೌತಿಕ ಘಟಕ ಸ್ಥಾಪನೆ ಮಾಡಲು ಆರ್ಥಿಕ ರೂ.27.75 ಲಕ್ಷಗಳ ಸಹಾಯ ಧನ ಬಂದಿದ್ದು,ಆಸಕ್ತ ರೈತರು ಅರ್ಜಿಸಲ್ಲಿಸಬಹುದು. ಒಂದು ಲಕ್ಷ ಲೀಟರ್ ಮತ್ತು 2 ಲಕ್ಷ ಲೀಟರ್ ಸಾಮರ್ಥ್ಯದ ಘಟಕ ನಿರ್ಮಾಣಕ್ಕೆ  ಕ್ರಮವಾಗಿ ರೂ.3.25 ಹಾಗೂ ರೂ. 5.00 ಲಕ್ಷ ಸಹಾಯಧನ ಲಭ್ಯವಿದೆ.

ಆಸಕ್ತಿಯುಳ್ಳ ತೋಟಗಾರಿಕೆ ಬೆಳೆ ಬೆಳೆಯುತ್ತಿರುವ ರೈತರು ಸಂಬಂಧಪಟ್ಟ ತಾಲ್ಲೂಕುಗಳ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದೆಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top