Connect with us

Dvgsuddi Kannada | online news portal | Kannada news online

ವಾರಾಂತ್ಯದ ಕರ್ಫ್ಯೂ : ದಾವಣಗೆರೆಯಲ್ಲಿ ಸಂಪೂರ್ಣ ಬಂದ್

ಪ್ರಮುಖ ಸುದ್ದಿ

ವಾರಾಂತ್ಯದ ಕರ್ಫ್ಯೂ : ದಾವಣಗೆರೆಯಲ್ಲಿ ಸಂಪೂರ್ಣ ಬಂದ್

ದಾವಣಗೆರೆ: ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ರಾಜ್ಯ ಸರ್ಕಾರ ವಾರಾಂತ್ಯ ಕರ್ಫ್ಯೂ ಘೋಷಣೆ ಮಾಡಿದ್ದು,  ದಾವಣಗೆರೆಯಲ್ಲಿ ಕರ್ಫ್ಯೂಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ.  ವಾಣಿಜ್ಯ ವಹಿವಾಟು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ನಗರದ ಎಲ್ಲಾ ರಸ್ತೆಗಳು ಖಾಲಿಯಾಗಿದ್ದವು.

davangere curfw 2

ನಗರದ ಜಯದೇವ ವೃತ್ತ, ಅಂಬೇಡ್ಕರ್ ಸರ್ಕಲ್, ಪಿ.ಬಿ ರಸ್ತೆ, ಗಾಂಧಿ ಸರ್ಕಲ್, ಎಪಿಎಂ, ಗುಂಡಿ ಸರ್ಕಲ್ ಸೇರಿದಂತೆ ಎಲ್ಲ ಕಡೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ.  ಸಾರ್ವಜಕರು, ವ್ಯಾಪಾರಸ್ಥರು ಕರ್ಫ್ಯೂ ಬೆಂಬಲಿಸಿ ರಸ್ತೆಗೆ ಇಳಿದ ಹಿನ್ನೆಲೆ ಎಲ್ಲಾ ರಸ್ತೆಗಳು ಖಾಲಿ ಖಾಲಿಯಾಗಿದ್ದವು. ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಕೆ.ಎಸ್ ಗಿರೀಶ್ ಅವರು ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಅಂಗಡಿ ಬಂದ್ ಮಾಡಿಸಿದರು. ವ್ಯಾಪಾರಕ್ಕೆ ಅವಕಾಶವಿಲ್ಲ. ಸರ್ಕಾರದ ಅದೇಶ ಪಾಲನೆ ಮಾಡಿ ಎಂದು  ಸೂಚಿಸಿದರು.

davangere curfw3

ಅಗತ್ಯ ವಸ್ತುಗಳಾದ ಮೆಡಿಕಲ್ ಸ್ಟೋರ್ ಗಳು, ತರಕಾರಿ, ಹಾಲು ದಿನಸಿ ಅಂಗಡಿ, ಬೇಕರಿ ಸೇರಿದಂತೆ ಇತರೆ ವಸ್ತುಗಳ ಖರೀದಿಗೆ ಬೆಳಗ್ಗೆ 6 ಗಂಟೆಯಿಂದ 10ರವರೆಗೆ ವರೆಗೆ ಅವಕಾಶ ಕಲ್ಪಿಸಲಾಗಿತ್ತು. ಈ ಸಮಯದಲ್ಲಿ ಗ್ರಾಹಕರು ತಮಗೆ ಅಗತ್ಯ ವಸ್ತುಗಳನ್ನು ಖರೀದಿಸಿದ್ರು.  10 ಗಂಟೆಯ ನಂತರ ಮೆಡಿಕಲ್ ಗಳನ್ನು ಬಿಟ್ಟು ಬಾಕಿ ಎಲ್ಲ ಅಂಗಡಿಗಳು ಮುಚ್ಚಿದ್ದವು.

davangere curfw.jpg 4

ಲಾರಿ ಸಂಚರಿಸಿಲ್ಲ.  ಬಸ್  ಸಂಚಾರಕ್ಕೆ ಅವಕಾಶವಿದ್ದರೂ ಪ್ರಯಾಣಿಕರಿಲ್ಲ. ಕೆಎಸ್ ಆರ್ ಟಿಸಿ ಬಸ್ ಗಳು ಯಥಾ ಪ್ರಕಾರ ಸಂಚರಿಸುತ್ತಿವೆ. ಖಾ ಖಾಲಿಯಾಗಿ ಓಡಾಡುತ್ತಿವೆ.  ಇನ್ನು  ಖಾಸಗಿ ಬಸ್  ಸಂಚರ ಸ್ಥಗಿತಗೊಳಿಸಿವೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top