Connect with us

Dvgsuddi Kannada | online news portal | Kannada news online

ದಾವಣಗೆರೆ: ಮಹಿಳೆಯರ ಫ್ರೀ ಬಸ್ ಷರತ್ತಿನ ವಿರುದ್ಧ ಶಾಮನೂರು ಶಿವಶಂಕರಪ್ಪ ಅಸಮಾಧಾನ

ದಾವಣಗೆರೆ

ದಾವಣಗೆರೆ: ಮಹಿಳೆಯರ ಫ್ರೀ ಬಸ್ ಷರತ್ತಿನ ವಿರುದ್ಧ ಶಾಮನೂರು ಶಿವಶಂಕರಪ್ಪ ಅಸಮಾಧಾನ

ದಾವಣಗೆರೆ: ರಾಜ್ಯ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಫ್ರೀ ಬಸ್‌ ಟಿಕೆಟ್ ಯೋಜನೆಗೆ ಚಾಲನೆ ನೀಡಲಾಗಿದೆ. ಈ ಶಕ್ತಿ ಯೋಜನೆಗೆ ಸರ್ಕಾರದ ಷರತ್ತಿನ ವಿರುದ್ಧ ಮಾಜಿ ಸಚಿವ, ಶಾಸಕ, ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

ದಾವಣಗೆರೆಯಲ್ಲಿ ಶಕ್ತಿ ಯೋಜನೆಗೆ ಚಾಲನೆ ನಂತರ ಮಾತನಾಡಿ, ಗುರುತಿನ ಚೀಟಿ ಇರುವವರು ಮಾತ್ರ ಬಸ್ ನಲ್ಲಿ ಓಡಾಡಬೇಕು ಅನ್ನೋದು ತಪ್ಪು. ನೋಡಿದ ತಕ್ಷಣ ಹೆಂಗಸರು ಯಾರು, ಗಂಡಸರು ಯಾರು ಅಂತ ಗೊತ್ತಾಗುತ್ತೆ. ಇವರಿಗೆ ಮತ್ಯಾಕೆ ಗುರುತಿನ ಚೀಟಿ. ಗುರುತಿನ ಚೀಟಿ ಇಟ್ಕೊಂಡು ಓಡಾಡಬೇಕು ಅಂತ ಷರತ್ತು ಹಾಕಿದ್ದು ಸರಿ ಅಲ್ಲ ಎಂದು ಹೇಳಿದರು.

ಕೆಎಸ್ ಆರ್ ಟಿಸಿ ಸಂಸ್ಥೆ ಲಾಭದಲ್ಲಿದೆ. ಹೊರ ರಾಜ್ಯದ ಮಹಿಳೆಯರು ಕೂಡ ರಾಜ್ಯದಲ್ಲಿ ಫ್ರೀ ಓಡಾಡಲು ಅವಕಾಶ ಕೊಡಬೇಕು. ನಾನು ಈ ಬಗ್ಗೆ ಅಧಿವೇಶನದಲ್ಲಿ ಮಾತನಾಡುತ್ತೇನೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top