ದಾವಣಗೆರೆ: ಹಿಂದೂ ರಾಷ್ಟ್ರವಾದ್ರೆ ದೇಶಕ್ಕೆ ಅಪಾಯ; ಜಾತ್ಯಾತೀತ ತತ್ವ ಬಿಟ್ಟು ಧರ್ಮದ ಹಿಂದೆ ಹೋದ್ರೆ ಅಭಿವೃದ್ಧಿ ಸಾಧ್ಯವಿಲ್ಲ; ಯತೀಂದ್ರ ಸಿದ್ದರಾಮಯ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ನಮ್ಮ ದೇಶ ಹಿಂದೂ ರಾಷ್ಟ್ರವಾದ್ರೆ, ದೇಶಕ್ಕೆ ದೊಡ್ಡ ಅಪಾಯವಿದೆ. ಜಾತ್ಯಾತೀತ ತತ್ವ ಬಿಟ್ಟು ಧರ್ಮದ ಹಿಂದೆ ಹೋದ್ರೆ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕೊಟ್ಟಿದ್ದಾರೆ.

ರುದ್ರನಕಟ್ಟೆ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ದೇಶ ಹಿಂದು ರಾಷ್ಟ್ರವಾದರೆ ಪಾಕಿಸ್ತಾನ, ಅಫ್ಘಾನಿಸ್ತಾನ ರಾಇತಿ ಆಗುತ್ತದೆ. ಪಾಕಿಸ್ತಾನ, ಅಫ್ಘಾನಿಸ್ತಾನ ಧರ್ಮದ ಹೆಸರಲ್ಲಿ ಸರ್ವಾಧಿಕಾರ ಮಾಡಿ ದಿವಾಳಿಯಾಗಿವೆ. ದೇಶ ಜಾತ್ಯಾತೀತ ತತ್ವ ಬಿಟ್ಟು ಧರ್ಮದ ಹಿಂದೆ ಹೋದರೆ ಅಭಿವೃದ್ಧಿ ಕಾಣಲ್ಲ ಎಂದರು.

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನಿಂದ ಜಾತ್ಯಾತೀತ ತತ್ವಕ್ಕೆ ಅಪಾಯ ಶುರುವಾಗಿದೆ. ಬಿಜೆಪಿಯ ಅಂಗ ಸಂಘಟನೆಗಳು ಹಿಂದೂ ದೇಶ ಮಾಡೋಕೆ ಹೊರಟಿದ್ದಾರೆ. ಇದಕ್ಕೆ ಅವಕಾಶ ಮಾಡಿಕೊಟ್ಟರೆ ನಮ್ಮ ದೇಶ ಕೂಡ ಪಾಕಿಸ್ತಾನ ಅಪ್ಘಾನಿಸ್ತಾನ ಆಗುತ್ತದೆ. ಧರ್ಮದ ಮೇಲೆ ರಾಜಕೀಯ ಮಾಡುವ ಪಕ್ಷಗಳ ಬಗ್ಗೆ ನಾವು ಹುಷಾರಾಗಿರಬೇಕು. ಧರ್ಮದಿಂದ ಹಿಂದುಳಿದವರು ಮೇಲೇಳೋಕೆ ಸಾಧ್ಯವಾಗುತ್ತಿಲ್ಲ. ಇತಿಹಾಸವನ್ನು ನೋಡಿ ನಾವು ಪಾಠ ಕಲಿಯಬೇಕು. ಇತಿಹಾಸ ನೋಡಿ ನಾವು ದೇಶವನ್ನು ಕಟ್ಟಬೇಕು ಎಂದರು.,

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *