ದಾವಣಗೆರೆ: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ತರಬೇತಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ; ಸರ್ಕಾರಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನ ಅಂಗವಾಗಿ ತರಬೇತಿ ಆಯೋಜಿಸಿದ್ದು, ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೆ ಪ್ರಶಂಸಾ ಪತ್ರ ವಿತರಿಸಲಾಯಿತು.

ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ॥ ರತ್ನ ಡಿ.ಎಂ ಸಮಾರೋಪ ಕಾರ್ಯಕ್ರಮ ಉದ್ಘಾಟಿಸಿ ಆಧುನಿಕ ಜೀವನ ಶೈಲಿಯಿಂದ ರೋಗಗಳು ಬರುತ್ತಿದ್ದು. ಜೀವನ ಶೈಲಿ ಬದಲಾವಣೆ ಮಾಡಿಕೊಂಡು ಯೋಗವನ್ನು ಸೀಮಿತಗೊಳಿಸದೇ ಪ್ರತಿನಿತ್ಯ ಊಟ ನಿದ್ರೆಯಂತೆ ಯೋಗವನ್ನು ಕೂಡ ದಿನಚರಿ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.

ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಆಯುಷ್ ವಿಭಾಗದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವೈದ್ಯಾಧೀಕಾರಿ ಡಾ. ಮಂದಾಕಿನಿ ಮಾತಾನಾಡಿ, ಈಗ ಸಣ್ಣ ಮಕ್ಕಳಲ್ಲಿ ಮಾನಸಿಕ ಒತ್ತಡ, ಮಧುಮೇಹ, ಥೈರಾಡ್ ಸಮಸ್ಯೆ ಹೃದ್ರೋಗ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸುತ್ತ ಪ್ರತಿನಿತ್ಯ ಯೋಗಸಾನ ಮಾಡುವುದರಿಂದ ಮಾನಸಿನ ಸಮತೋಲನ ಏಕಗ್ರತೆ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ ಎಂದರು.ಯೋಗ ಗುರು ಆನಂದ ಕುಮಾರ್, ರೇವಣ್ಣ ಸಿಬ್ಬಂದಿಗಳಾದ ವಸಂತ ಲಕ್ಷ್ಮಿ, ಕವಿತ, ಪವಿತ್ರ ರಾಮಂಜನೇಯ ಡಿ, ಈಶ್ವರ, ವಿಜಯಮ್ಮ, ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *