Connect with us

Dvgsuddi Kannada | online news portal | Kannada news online

ದಾವಣಗೆರೆ: ಮನೆ ಶುಭ ಕಾರ್ಯಕ್ಕೆ ತೆಂಗಿನ ಕಾಯಿ ಕೀಳಲು ಮರವೇರಿದ ಯುವ ರೈತ ಆಯ ತಪ್ಪಿ ಬಿದ್ದು ಸಾವು

IMG 20230424 072040

ಹೊನ್ನಾಳಿ

ದಾವಣಗೆರೆ: ಮನೆ ಶುಭ ಕಾರ್ಯಕ್ಕೆ ತೆಂಗಿನ ಕಾಯಿ ಕೀಳಲು ಮರವೇರಿದ ಯುವ ರೈತ ಆಯ ತಪ್ಪಿ ಬಿದ್ದು ಸಾವು

ದಾವಣಗೆರೆ; ಮನೆ ಶುಭ ಕಾರ್ಯಕ್ಕೆ ತೆಂಗಿನ ಕಾಯಿ ಕೀಳಲು ಮರವೇರಿದ್ದ ಯುವ ರೈತನೊಬ್ಬ ಆಯ ತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ಹೊನ್ನಾಳಿ ತಾಲ್ಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮನೆಯಲ್ಲಿ ಶುಭ ಕಾರ್ಯ ಹಿನ್ನೆಲೆ ಸ್ನೇಹಿತನ ತೋಟದಲ್ಲಿ ತೆಂಗಿನ ಕಾಯಿ ಕೀಳಲು ಮರವೇರಿದ್ದ ಬೆನಕನಹಳ್ಳಿಯ ಯುವ ರೈತ ಮಂಜುನಾಥ್ (30) ಆಯ ತಪ್ಪಿ ಕೆಳಗೆ ಬಿದ್ದಿದ್ದಾನೆ. ಅಲ್ಲೇ ಇದ್ದ ಸ್ನೇಹಿತರ ಕೂಡಲೇ ಮುಂಜುನಾಥ್ ನನ್ನು ಹೊನ್ನಾಳಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ತೀವ್ರವಾಗಿ ಪೆಟ್ಟು ಬಿದ್ದಿದ್ದರಿಂದ ಸಾವನ್ನಪ್ಪಿದ್ದಾನೆ. ಶುಭ ಕಾರ್ಯದ ದಿನವೇ ದುರ್ಘಟನೆ ಈ ನಡೆದಿದ್ದರಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಬಗ್ಗೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹೊನ್ನಾಳಿ

To Top