Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿ.ಪಂ ವತಿಯಿಂದ ಮಾನವ ಅಭಿವೃದ್ಧಿ ವರದಿ ತಯಾರಿಕೆಗೆ ಅರ್ಹರಿಂದ ಅರ್ಜಿ ಆಹ್ವಾನ

zp davangere

ದಾವಣಗೆರೆ

ದಾವಣಗೆರೆ: ಜಿ.ಪಂ ವತಿಯಿಂದ ಮಾನವ ಅಭಿವೃದ್ಧಿ ವರದಿ ತಯಾರಿಕೆಗೆ ಅರ್ಹರಿಂದ ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲಾ ಪಂಚಾಯ್ತಿ ವತಿಯಿಂದ ಜಿಲ್ಲಾ ಮಾನವ ಅಭಿವೃದ್ಧಿ-2025ರ ವರದಿ ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ-2031ರ ವರದಿ ತಯಾರಿಕೆಗೆ ಅರ್ಹ ತಾಂತ್ರಿಕ ಸಂಸ್ಥೆಗಳಿಂದ ಆಸಕ್ತಿ ಅಭಿವ್ಯಕ್ತಿ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ಅರ್ಹ ಸಂಸ್ಥೆ ವಿಶ್ವವಿದ್ಯಾಲಯದವರು 10 ದಿನದೊಳಗಾಗಿ ಈ ವರದಿಗಳ ತಯಾರಿಕೆಗೆ ಪ್ರತ್ಯೇಕ ಸಂಯೋಜನೆಯೊಂದಿಗೆ ಹಾಗೂ ಪ್ರತ್ಯೇಕ ಆಸಕ್ತಿ ಅಭಿವ್ಯಕ್ತಿ (Expression of Interest ) ಸಲ್ಲಿಸಬಹುದು.

ನಿಬಂಧನೆ: ತಮ್ಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಮಾನವ ಅಭಿವೃದ್ಧಿ ವರದಿ ಹಾಗೂ ಸಮಗ್ರ ಮತ್ತು ಸುಸ್ಥಿತರ ಜಿಲ್ಲಾ ಅಭಿವೃದ್ದಿ ಯೋಜನೆ- 2031ರ ವರದಿಗಳ ತಯಾರಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಿರುವಂತಹ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಾಕರನ್ನು ಸಂಯೋಜಕರನ್ನಾಗಿ ಸಂಖ್ಯಾಶಾಸ್ತ್ರ ವಿಭಾಗದ ಪ್ರಾಧ್ಯಾಪಾಕರನ್ನು ಸಹಾಯಕ ಸಂಯೋಜಕರನ್ನಾಗಿ ಮತ್ತು ಸಂಶೋಧನಾ ವಿದ್ಯಾರ್ಥಿಗಳನ್ನು ಹಾಗೂ ಡೇಟಾ ಎಂಟ್ರಿ ಸಿಬ್ಬಂದಿಯನ್ನು ತೆಗೆದುಕೊಳ್ಳುವುದು. ಈ ನಿಬಂಧನೆಗನುಸಾರ ಅರ್ಹತೆಯುಳ್ಳ ಸ್ಥಳೀಯ ಸಂಸ್ಥೆಗಳಿಗೆ ಆದ್ಯತೆಯನ್ನು ನೀಡಲಾಗುವುದೆಂದು ಜಿ.ಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top