Connect with us

Dvgsuddi Kannada | online news portal | Kannada news online

ದಾವಣಗೆರೆ: ಲೀಡ್ ಬ್ಯಾಂಕ್ ನಿಂದ ಸುವರ್ಣ ಅವಕಾಶ; ಸಣ್ಣ ಉದ್ಯಮ, ಗೃಹ , ವಾಹನ, ಶೈಕ್ಷಣಿಕ, ಕೃಷಿ ಸಾಲ ಸಂಪರ್ಕ ಕಾರ್ಯಕ್ರಮ ಆಯೋಜನೆ

loans 1

ದಾವಣಗೆರೆ

ದಾವಣಗೆರೆ: ಲೀಡ್ ಬ್ಯಾಂಕ್ ನಿಂದ ಸುವರ್ಣ ಅವಕಾಶ; ಸಣ್ಣ ಉದ್ಯಮ, ಗೃಹ , ವಾಹನ, ಶೈಕ್ಷಣಿಕ, ಕೃಷಿ ಸಾಲ ಸಂಪರ್ಕ ಕಾರ್ಯಕ್ರಮ ಆಯೋಜನೆ

ದಾವಣಗೆರೆ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ ಆರ್ಥಿಕ ವ್ಯವಹಾರಗಳನ್ನು ಗಣನೀಯವಾಗಿ ಹೆಚ್ಚಿಸಲು ಹಾಗೂ ಗ್ರಾಹಕರಿಗೆ ಆರ್ಥಿಕ ಉತ್ತೇಜನವನ್ನು ನೀಡುವ  ಉದ್ದೇಶದಿಂದ ಕೇಂದ್ರ ಹಣಕಾಸು ಸೇವೆಗಳ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿಯ ನಿರ್ದೇಶನದ ಮೇರೆಗೆ “ಸಾಲ ಸಂಪರ್ಕ ಕಾರ್ಯಕ್ರಮ” ವನ್ನು  ಅ.27 ರಂದು ಬುಧವಾರ ಬೆಳಿಗ್ಗೆ 10.30 ಕ್ಕೆ  ನಗರದ ತೊಗಟವೀರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ದಾವಣಗೆರೆ ಜಿಲ್ಲಾ ಲೀಡ್ ಬ್ಯಾಂಕಿನ ವಿಭಾಗೀಯ ಪ್ರಬಂಧಕ ಸುಶ್ರುತ್ ಡಿ ಶಾಸ್ತ್ರಿ ತಿಳಿಸಿದ್ದಾರೆ.

ಸಾಲ ಸಂಪರ್ಕ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಪ್ರಮುಖ ಬ್ಯಾಂಕುಗಳು ಮತ್ತು ನಬಾರ್ಡ್  ಪಾಲ್ಗೊಂಡು ಗ್ರಾಹಕರಿಗೆ ವಿವಿಧ ಸಾಲ ಸೌಲಭ್ಯಗಳು ಮತ್ತು ಸರಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡಿ ಸಾಲವನ್ನು ಪಡೆಯಲು ಅನುಸರಿಸಬೇಕಾದ ವಿಧಾನಗಳ ಬಗ್ಗೆ ಮಾರ್ಗದರ್ಶನವನ್ನು ನೀಡುವ ಉದ್ದೇಶವನ್ನು ಇಟ್ಟುಕೊಳ್ಳಲಾಗಿದೆ. ಹಾಗೆಯೇ ಸಣ್ಣ-ಮದ್ಯಮ-ಅತಿ ಸಣ್ಣ ಉದ್ಯಮಿಗಳಿಗೆ ಸಾಲ, ಗೃಹ ಸಾಲ, ವಾಹನ ಸಾಲ, ಶೈಕ್ಷಣಿಕ ಸಾಲ, ಕೃಷಿ ಸಾಲ, ಸ್ತ್ರೀಶಕ್ತಿ ಸಂಘಗಳಿಗೆ ಮತ್ತು ಸ್ವಸಹಾಯ ಗುಂಪುಗಳಿಗೆ ನೀಡುವ ಸಾಲ ಯೋಜನೆಗಳಿಗೆ ಒತ್ತು ನೀಡಿ ಅರ್ಹ ಅರ್ಜಿದಾರರಿಗೆ ಶೀಘ್ರ ಸಾಲ ಮಂಜೂರಾತಿ ನೀಡುವ ಗುರಿಯನ್ನೂ ಹೊಂದಲಾಗಿದೆ ಎಂದು ಸುಶ್ರುತ್ ಡಿ ಶಾಸ್ತ್ರಿ ಅವರು ತಿಳಿಸಿದ್ದಾರೆ‌.

ಸಾಲ ಸಂಪರ್ಕ ಕಾರ್ಯಕ್ರಮದ ಉದ್ಘಾಟನೆಯನ್ನು ದಾವಣಗೆರೆಯ ಸಂಸದ ಶ್ರೀ ಜಿ.ಎಂ.ಸಿದ್ದೇಶ್ವರ ಅವರು ನೆರವೇರಿಸಲಿದ್ದಾರೆ ಹಾಗೂ ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಜಯಮಹಂತೇಶ್ ದಾನಮ್ಮನವರ್, ಕೆನರಾ ಬ್ಯಾಂಕಿನ ಕ್ಷೇತ್ರೀಯ ಕಾರ್ಯಾಲಯದ ಸಹಾಯಕ ಮಹಾ ಪ್ರಬಂಧಕ ಹೆಚ್.ರಘುರಾಜ, ನಬಾರ್ಡ್‌ನ ಜಿಲ್ಲಾ ವ್ಯವಸ್ಥಾಪಕ ವಿ.ರವೀಂದ್ರ ಹಾಗೂ ಪ್ರಮುಖ ಬ್ಯಾಂಕುಗಳ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಮತ್ತು ಬ್ಯಾಂಕ್ ಗ್ರಾಹಕರು ಕಾರ್ಯಕ್ರಮದ ಪ್ರಯೋಜನವನ್ನು ಪಡೆಯಬೇಕಾಗಿ ಲೀಡ್ ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top