ದಾವಣಗೆರೆ:ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್8-ವಿಜಯನಗರ ಮಾರ್ಗದ ವ್ಯಾಪ್ತಿಯಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿ ನಿರ್ವಹಿಸಬೇಕಿದ್ದು, ಇಂದು (ಸೆ. 16) ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಫ್8-ವಿಜಯನಗರ ಫೀಡರ್ ವ್ಯಾಪ್ತಿಯ ದೇವರಾಜ್ಅರಸ್ ಬಡಾವಣೆ ‘ಬಿ’ ಬ್ಲಾಕ್ ಮತ್ತು ‘ಸಿ’ ಬ್ಲಾಕ್, ಎಸ್ಪಿ ಆಫೀಸ್, ಆರ್ಟಿಓಆಫೀಸ್, ವಿಜಯನಗರ ಬಡಾವಣೆ, ರಾಜೀವಗಾಂಧಿ ಬಡಾವಣೆ, ಎಸ್ಪಿಎಸ್ ನಗರ 2ನೇ ಹಂತ, ಎಸ್ಎಮ್ಕೆ ನಗರ, ವಾಲ್ಮೀಕಿ ಸರ್ಕಲ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವುಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ತುರ್ತು ಕಾಮಗಾರಿ ಮತ್ತು ಸ್ವೀಕರಣಾ ಕೇಂದ್ರದ ನಿರ್ವಹಣಾ ಕಾಮಗಾರಿ ನಿರ್ವಹಿಸುವ ಕೆಲಸ ಹಮ್ಮಿಕೊಂಡಿರುವುದರಿಂದ ಸೆ. 16 ರಂದು ಕೆ.ಟಿ.ಜೆ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.



