ದಾವಣಗೆರೆ: ಶಾಮನೂರು ಶಿವಶಂಕರಪ್ಪಜನ ಕಲ್ಯಾಣ ಟ್ರಸ್ಟ್ ವತಿಯಿಂದ 2021-22 ನೇ ಸಾಲಿನ ರಾಜ್ಯದ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕಳೆದ 10 ವರ್ಷಗಳಿಂದ ಟ್ರಸ್ಟ್ ಮೂಲಕ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಐಟಿಐ , ಡಿಪ್ಲೊಮಾ, ಪದವಿ, ವೃತ್ತಿ ಶಿಕ್ಷಣ, ಕಾನೂನು ಪದವಿ ಹಾಗೂ ಮ್ಯಾನೇಜ್ ಮೆಂಟ್ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಿಂದಿನ ವರ್ಷ 700 ಬಡ ವಿದ್ಯಾರ್ಥಿಗಳಿಗೆ ವೇತನ ನೀಡಲಾಗಿದೆ. ಪ್ರತಿಭಾನ್ವಿತ ವಿದ್ಯಾರ್ಥಿಳು ಆಯಾ ಶಾಲೆ, ಕಾಲೇಜಿನ ಮುಖ್ಯಸ್ಥರಿಂದ ಪ್ರಮಾಣ ಪತ್ರ ಪಡೆದಿರಬೇಕು.
ಅರ್ಜಿಯನ್ನು ಟ್ರಸ್ಟ್ ನ ವೆಬ್ ಸೈಟ್ www.ssjanakalyantrust.Org ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ.



