Connect with us

Dvgsuddi Kannada | online news portal | Kannada news online

ದಾವಣಗೆರೆ; ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ; ಅಪಾರ ಪ್ರಮಾಣದ ಬೆಳೆ ಹಾನಿ: ಕೊಚ್ಚಿ ಹೋದ ಕರ್ಲಳ್ಳಿ ಬ್ರಿಡ್ಜ್

IMG 20220519 181141

ದಾವಣಗೆರೆ

ದಾವಣಗೆರೆ; ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ; ಅಪಾರ ಪ್ರಮಾಣದ ಬೆಳೆ ಹಾನಿ: ಕೊಚ್ಚಿ ಹೋದ ಕರ್ಲಳ್ಳಿ ಬ್ರಿಡ್ಜ್

ದಾವಣಗೆರೆ: ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಸತತ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಎಲ್ಲೆಲ್ಲೋ ಮಳೆ ನೀರು ಉಕ್ಕಿ ಹರಿಯುದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ಜನರು ಪರದಾಡುತ್ತಿದ್ದಾರೆ. ಇನ್ನು ರೈತರ ಜಮೀನಲ್ಲಿ ಮಳೆ ನೀರು ಹರಿಯುತ್ತಿದ್ದು‌ ಭತ್ತ,ಅಡಿಕೆ, ಬಾಳೆ ಸೇರಿದಂತೆ ಇತರೆ ಬೆಳೆಗಳಿಗೆ ಅಪಾರ ಪ್ರಮಾಣದ ಹಾನಿಯಾಗಿದೆ.

ಜಿಲ್ಲೆಯಲ್ಲಿ ಬುಧವಾರ ಭಾರಿ ಮಳೆ ಸುರಿದ ಪರಿಣಾಮ ಹರಿಹರ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹರಿಹರ ತಾಲ್ಲೂಕಿನ ನಂದಿಗುಡಿ ಗ್ರಾಮದಲ್ಲಿ ಹೊಸ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಕರ್ಲಳ್ಳಿ ಹಳ್ಳಕ್ಕೆ ಬ್ರಿಡ್ಜ್ ನಿರ್ಮಿಸಲಾಗುತ್ತಿರುವ ಹಿನ್ನಲೆ ಸಂಪರ್ಕಕ್ಕಾಗಿ ತಾತ್ಕಾಲಿಕ ಮಣ್ಣಿನ ಪೈಪ್‍ಲೈನ್ ರಸ್ತೆ ನಿರ್ಮಾಣ ಮಾಡಲಾಗಿತ್ತು, ಮಳೆಯಿಂದಾಗಿ ತಾತ್ಕಾಲಿಕ ಮಣ್ಣಿನ ರಸ್ತೆ ಕೊಚ್ಚಿಕೊಂಡು ಹೋಗಿ ನಂದಿಗುಡಿ ಸಂಪರ್ಕ ರಸ್ತೆ ಕಡಿತವಾಗಿರುವ ಹಿನ್ನಲೆಯಲ್ಲಿ ರಸ್ತೆ ಸರಿಪಡಿಸುವಂತೆ ಪಿಡಬ್ಲ್ಯೂಡಿ ಕಾರ್ಯನಿರ್ವಾಹಕ ಅಭಿಯಂತರರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಕಂಬತ್ತನಹಳ್ಳಿ, ಭಾಸ್ಕರ್ ರಾವ್ ಕ್ಯಾಂಪ್ ಮತ್ತು ಕೊಕ್ಕನೂರು ಗ್ರಾಮಗಳಿಗೆ ತಹಶೀಲ್ದಾರ್ ಜೊತೆಗೆ ಭೇಟಿ ನೀಡಿ ಹಾನಿಗೊಳಗಾದ ಭತ್ತ ಮತ್ತು ಅಡಿಕೆ ಬೆಳೆಗಳನ್ನು ಪರಿಶೀಲನೆ ನಡೆಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top