Connect with us

Dvgsuddi Kannada | online news portal | Kannada news online

ದಾವಣಗೆರೆ: ಎಲೆಬೇತೂರು ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ವೃದ್ಧ ದಂಪತಿ ಬರ್ಬರ ಹತ್ಯೆ

davangere murder

ದಾವಣಗೆರೆ

ದಾವಣಗೆರೆ: ಎಲೆಬೇತೂರು ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ವೃದ್ಧ ದಂಪತಿ ಬರ್ಬರ ಹತ್ಯೆ

ದಾವಣಗೆರೆ: ತಾಲ್ಲೂಕಿನ ಎಲೆಬೇತೂರು ಗ್ರಾಮದಲ್ಲಿ ವೃದ್ಧ ದಂಪತಿಯನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ  ಮಾಡಿರುವ ಘಟನೆ ನಡೆದಿದೆ. ಗುರುಸಿದ್ದಯ್ಯ (80) ಸರೋಜಮ್ಮ (75) ಕೊಲೆಯಾದ ದಂಪತಿಯಾಗಿದ್ದಾರೆ. ತಡರಾತ್ರಿಕೊಲೆ ನಡೆದಿದದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ನಿನ್ನೆ (ಜ.24)  ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ದಂಪತಿಗೆ ಮೂವರು ಹೆಣ್ಣು ಮಕ್ಕಳು ಇದ್ದು ಎಲ್ಲರಿಗೂ ಮದುವೆ ಮಾಡಿಕೊಟ್ಟಿದ್ದಾರೆ. ಮನೆಯಲ್ಲಿ ಪತಿ‌-ಪತ್ನಿ ಇಬ್ಬರೇ ವಾಸವಾಗಿದ್ದರು. ಪಕ್ಕದ ಮನೆಯವರು ಇಂದು ಬೆಳಗ್ಗೆ ಸರೋಜಮ್ಮ ಅವರನ್ನ ಭೇಟಿ ಮಾಡಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್,ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿರಾಮಗೊಂಡ ಬಸರಗಿ,ಗ್ರಾಮಾಂತರ ಠಾಣೆಯ ಪೊಲೀಸರ ಭೇಟಿ ಪರಿಶೀಲನೆ ನಡೆಸಿ‌ದ್ದಾರೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top