Connect with us

Dvgsuddi Kannada | online news portal | Kannada news online

ಉಚಿತವಾಗಿ ಕೊರೊನಾ ಪರೀಕ್ಷೆ ಸಾಧ್ಯವಾಗದವರಿಗೆ ಲಸಿಕೆ ಉಚಿತವಾಗಿ ಕೊಡ್ತಾರಾ..?: NSUI

ದಾವಣಗೆರೆ

ಉಚಿತವಾಗಿ ಕೊರೊನಾ ಪರೀಕ್ಷೆ ಸಾಧ್ಯವಾಗದವರಿಗೆ ಲಸಿಕೆ ಉಚಿತವಾಗಿ ಕೊಡ್ತಾರಾ..?: NSUI

ಡಿವಿಜಿ ಸುದ್ದಿ, ದಾವಣಗೆರೆ: ಕೋವಿಡ್ ಗೆ ಇನ್ನೂ ಲಸಿಕೆಯನ್ನೇ ಕಂಡು ಹಿಡಿದಿಲ್ಲ, ಈಗ ಬಿಹಾರದಲ್ಲಿ ಚುನಾವಣೆಯ ಪ್ರಣಾಳಿಕೆಯಲ್ಲಿ ಲಸಿಕೆ ಬಂದ ಮೇಲೆ ಅವರಿಗೆ ಉಚಿತವಾಗಿ ಕೊಡಲಾಗುವುದು ಎಂದು ಹೇಳಿರುವ ಬಿಜೆಪಿ ಕೂಸುಟ್ಟುವ ಮೊದಲೇ ಕುಲಾವಿ ಹೊಲೆದಿದೆ ಎಂದು  NSUI ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ್ ಪಾಟೀಲ್ ಟೀಕಿಸಿದ್ದಾರೆ. ಕರ್ನಾಟಕದಲ್ಲಿ ಚುನಾವಣೆಗೆ ಇನ್ನು ಎರಡು ವರ್ಷ ಸಮಯವಿದೆ. ಕನ್ನಡಿಗರಿಗೆ ಅಲ್ಲಿವರೆಗೂ ಕಾಯಬೇಕಾ ..? ನಮ್ಮ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಾಲ ಸೀತಾರಾಮನ್ ಅವರು, ತಮ್ಮದೇ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಜನರಿಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿ ಮೊದಲು ನೋಡೋಣ…! ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ  ಕೇಂದ್ರ ಹಣಕಾಸು ಸಚಿವೆ ನಿರ್ಮಾಲ ಸೀತಾರಾಮನ್ ಅವರ ಔದಾರ್ಯ ಮೆಚ್ಚಲೇಬೇಕು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top