ದಾವಣಗೆರೆ-ಮಂತ್ರಾಲಯ ಎಸಿ ವೋಲ್ವೊ ಬಸ್‌ ಸೌಲಭ್ಯಕ್ಕೆ ಸಂಸದೆ ಚಾಲನೆ; ಸಮಯ, ಮಾರ್ಗ, ದರ ಪಟ್ಟಿ ಮಾಹಿತಿ ಇಲ್ಲಿದೆ..

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ಜಿಲ್ಲೆಯಿಂದ ಶ್ರೀಕ್ಷೇತ್ರ ಮಂತ್ರಾಲಯದ (Davngere-Mantralayam) ಪ್ರಯಾಣಿಸುವ ಭಕ್ತರ ಅನುಕೂಲಕ್ಕಾಗಿ ಇನ್ಮುಂದೆ ಪ್ರತಿ ದಿನ ಹವಾನಿಯಂತ್ರಿತ (AC) ವೋಲ್ಟ್ ಬಸ್‌ ಸೌಲಭ್ಯವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಆರಂಭಿಸಿದೆ. ಈ ನೂತನ ಬಸ್‌ ಸೇವೆಗೆ ಸಂಸದೆ ಪ್ರಭಾಮಲ್ಲಿಕಾರ್ಜುನ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ದಾವಣಗೆರೆ: ಲೋಕಾಯುಕ್ತ ಭರ್ಜರಿ ಬೇಟೆ; APMC ಸಹಾಯಕ‌ ನಿರ್ದೇಶಕ ಮನೆಯಲ್ಲಿ ಸಿಕ್ತು ಬರೋಬ್ಬರಿ 1 ಕೆಜಿ ಚಿನ್ನ, 10 ಕೆಜಿ ಬೆಳ್ಳಿ, 7.5 ಲಕ್ಷ ನಗದು, 6 ನಿವೇಶ ಪತ್ರ

ಪ್ರತಿ ನಿತ್ಯ ರಾತ್ರಿ 9ಕ್ಕೆ ದಾವಣಗೆರೆ‌‌ ನೂತನ ಬಸ್ ನಿಲ್ದಾಣದಿಂದ ಹೊರಡುವ ಬಸ್ ಚಿತ್ರದುರ್ಗ, ಬಳ್ಳಾರಿ ಮೂಲಕ ಬೆಳಗ್ಗೆ 4‌ಗಂಟೆಗೆ ಮಂತ್ರಾಲಯ ತಲುಪಲಿದೆ. ನಂತರ ಅದೇ ದಿನ ಬೆಳಿಗ್ಗೆ 11 ಗಂಟೆಗೆ ಮಂತ್ರಾಲಯದಿಂದ ಹೊರಡುವ ಬಸ್‌ ಸಂಜೆ 6ಕ್ಕೆ ದಾವಣಗೆರೆಗೆ ಮರಳಲಿದೆ.

ದಾವಣಗೆರೆ: ಪೊಲೀಸರೇ ಚಿನ್ನದ ದರೋಡೆಗೆ ಸಾಥ್; ಇಬ್ಬರು ಪಿಎಸ್‌ಐ ಸೇರಿದಂತೆ 7 ಆರೋಪಿಗಳ ಬಂಧನ 8 ಲಕ್ಷ ಮೌಲ್ಯದ ಚಿನ್ನ ವಶ

ದರ, ಮಾರ್ಗ ಹಾಗೂ ಸಮಯ

ಈ ಮಾರ್ಗ 325 ಕಿ.ಮೀ. ಪ್ರಯಾಣ ದೂರ ಹೊಂದಿದೆ. ದಾವಣಗೆರೆಯಿಂದ ಮಂತ್ರಾಲಯಕ್ಕೆ 600 ರೂ., ಚಿತ್ರದುರ್ಗದಿಂದ 547 ರೂ., ಚಳ್ಳಕೆರೆಯಿಂದ 515 ರೂ. ಬಳ್ಳಾರಿಯಿಂದ 296 ರೂ. ಪ್ರಯಾಣ ದರ ನಿಗದಿಪಡಿ
ಸಲಾಗಿದೆ. ಈ ಬಸ್ ಸೇವೆಯು ಪ್ರತಿನಿತ್ಯ ದೊರೆಯಲಿದೆ ಎಂದು ಮಾಹಿತಿ ನೀಡಿದರು.

ಮಂತ್ರಾಲಯ ರಾಘವೇಂದ್ರಸ್ವಾಮಿ ದರ್ಶನಕ್ಕೆ (Raghavendra Math) ಪ್ರಯಾಣಿಸುವ ಭಕ್ತರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಕೌಂಟರ್ ಅಥವಾ ksrtc.karnataka.gov.in ಸಂಪರ್ಕಿಸಿ ಮುಂಗಡ ಟಿಕೆಟ್ ಕಾಯ್ದಿರಿಸಿಕೊಳ್ಳಬಹುದು ಎಂದು ಕೆಎಸ್‌ಆರ್‌ಟಿಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಎಸ್. ಶಿವಕುಮಾರಯ್ಯ
ತಿಳಿಸಿದ್ದಾರೆ.

ಈ ವೇಳೆ ನಿಯಂತ್ರಣಾಧಿಕಾರಿ ಫಕ್ರುದ್ದೀನ್‌, ಜಿಲ್ಲಾ
ಪಂಚಾಯತ್ ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್‌ ಸೇರಿದಂತೆವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *