ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಸ್ಫೋಟಿಸುವ ಮೇಸೆಜ್​

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ತುಮಕೂರು, ದಾವಣಗೆರೆ, ವಿಜಯಪುರ ಸೇರಿದಂತೆ ಒಟ್ಟು 5 ಜಿಲ್ಲಾಧಿಕಾರಿ ಕಚೇರಿಯ (DC Office) ಇ-ಮೇಲ್ ಅಕೌಂಟ್‌ಗೆ ಹುಸಿ ಬಾಂಬ್​ ಬೆದರಿಕೆ (Bomb threat) ಸಂದೇಶ ಬಂದಿದೆ.

ಕನಿಷ್ಟ ದಾಖಲೆ ಇದ್ದರೂ ರೈತರ ಮನೆಬಾಗಿಲಿಗೆ ಸರ್ಕಾರದಿಂದ ಪೋಡಿ ದುರಸ್ಥಿ: ಕಂದಾಯ ಸಚಿವ

ಸಜ್ಜದ್ ಹೈದರ್ ಪಿಎಎಫ್ ಜಿಂದಾಬಾದ್ ಅಂತಾ ಉಲ್ಲೇಖಿಸಿ, ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯ ಇ-ಮೇಲ್ ಅಕೌಂಟ್‌ಗೆ, ಆರ್ನಾ ಅಶ್ವಿನ್ ಶೇಖರ್ ಎಂಬ ಔಟ್‌ಲುಕ್ ಇ-ಮೇಲ್ ಖಾತೆಯಿಂದ ಬಂದಿರುವ ಸಂದೇಶದಲ್ಲಿ ‘ಪಾಕಿಸ್ತಾನ – ತಮಿಳುನಾಡು DMK-2026 ಚುನಾವಣೆ ಗಮನ ಬೇರೆಡೆ ಸೆಳೆಯಲು ಬಯಸುತ್ತೆ’ಎಂಬ ವಿಷಯದಡಿ, ಹುಸಿ ಬೆದರಿಕೆ ಸಂದೇಶವನ್ನ ರವಾನಿಸಿದ್ದಾರೆ.

ಪರವಾನಗಿ ಭೂ ಮಾಪಕರ ಖಾಯಂ ಅಸಾಧ್ಯ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ಇದಲ್ಲದೆ ಸಂದೇಶದಲ್ಲಿ ತಮಿಳುನಾಡಿನಲ್ಲಿ ಪಾಕಿಸ್ತಾನ ಐಎಸ್‌ಐ ಸೆಲ್, ಮಾಜಿ ಎಲ್‌ಟಿಟಿಇ ಕಾರ್ಯಕರ್ತರೊಂದಿಗೆ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸುತ್ತಿದ್ದು, ‘ನಿಮ್ಮ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 5 ಬಾಂಬ್‌ಗಳಿದ್ದು, ಅವುಗಳನ್ನು ಶೀಘ್ರದಲ್ಲಿಯೇ ಸ್ಫೋಟಿಸಲಾಗುವುದು ಎಂದು ಕಳುಹಿಸಲಾಗಿದೆ.

ಮುಂದುವರೆದು, ಇ-ಮೇಲ್​ ಬರುತ್ತಿದ್ದಂತೆ, ತಕ್ಷಣ ವಿಚಾರ ದಾವಣಗೆರೆ ಎಸ್ಪಿಗೆ ತಿಳಿಸಿರುವ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಅವರು, ಕಚೇರಿಯ 40 ಕ್ಕೂ ಅಧಿಕ ಕೊಠಡಿಗಳನ್ನು ಪರಿಶೀಲ‌ನೆಗೊಳಪಡಿಸಿದ್ದಾರೆ. ಆದರೆ ಇದುವರೆಗೂ ಯಾವುದೇ ಬಾಂಬ್​ ಪತ್ತೆಯಾಗಿಲ್ಲ ತಪಾಸಣೆಯನ್ನ ಮುಂದುವರೆದಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *