Connect with us

Dvgsuddi Kannada | online news portal | Kannada news online

ವ್ಯಾದಿ ಬೂದಿ ಆತಲೆ, ಸೃಷ್ಟಿ ಸಿರಿ ಆತಲೆ ಪರಾಕ್ ; ರಾಣೇಬೆನ್ನೂರಿನ ದೇವರಗುಡ್ಡ ಮಾಲತೇಶ ದೇವರ ಕಾರ್ಣಿಕ

ಪ್ರಮುಖ ಸುದ್ದಿ

ವ್ಯಾದಿ ಬೂದಿ ಆತಲೆ, ಸೃಷ್ಟಿ ಸಿರಿ ಆತಲೆ ಪರಾಕ್ ; ರಾಣೇಬೆನ್ನೂರಿನ ದೇವರಗುಡ್ಡ ಮಾಲತೇಶ ದೇವರ ಕಾರ್ಣಿಕ

ಡಿವಿಜಿ ಸುದ್ದಿ, ಹಾವೇರಿ: ರಾಣೇಬೆನ್ನೂರು ತಾಲ್ಲೂಕು ದೇವರಗುಡ್ಡದ ಮಾಲತೇಶ ದೇವರ ಐತಿಹಾಸಿಕ ಕಾರ್ಣಿಕೋತ್ಸವ ಇಂದು ಜರುಗಿತು. ಹನ್ನೊಂದು ಅಡಿ ಎತ್ತರದ ಬಿಲ್ಲನ್ನೇರಿ ಕಾರ್ಣಿಕ ನುಡಿದ ನಾಗಪ್ಪಜ್ಜ ಗೊರವಯ್ಯ, ವ್ಯಾದಿ ಬೂದಿ ಆತಲೆ, ಸೃಷ್ಟಿ ಸಿರಿ ಆತಲೆ ಪರಾಕ್ ಎಂದು ದೈವವಾಣಿಯನ್ನ ಗೊರವಯ್ಯ ನುಡಿದ್ದಾರೆ.

ವರ್ಷದ ಭವಿಷ್ಯವಾಣಿ ಎಂತಲೆ ನಂಬಲಾಗಿರೋ ಕಾರ್ಣಿಕ ಗ್ರಾಮ ಸೇರಿದಂತೆ ಜಿಲ್ಲೆಯ ಸುತ್ತಮುತ್ತಲಿನ ಗ್ರಾಮದ ಭಕ್ತರು ಈ ಕಾರ್ಣಿಕದಲ್ಲಿ ಭಾಗವಹಿಸಿದ್ದರು. ಪ್ರತಿವರ್ಷ ವಿಜಯ ದಶಮಿ ಹಬ್ಬದಲ್ಲಿ ನಡೆಯುವ ಮಾಲತೇಶ ದೇವರ ಕಾರ್ಣಿಕ ಪ್ರಸಿದ್ಧಿ ಪಡೆದಿದೆ.

ವ್ಯಾದಿ ಬೂದಿ ಆತಲೆ, ಸೃಷ್ಟಿ ಸಿರಿ ಆತಲೆ ಪರಾಕ್ ದೈವವಾಣಿಯು, ಕೊರೊನಾ ಎಂಬ ರೋಗ ದೂರವಾಗಿ ಸೃಷ್ಟಿಯಲ್ಲಿ ಸಿರಿ ಆಗಲಿದೆ. ಮುಂಗಾರು ಬೆಳೆ ಹಾನಿಯಾಗಿವೆ. ಹಿಂಗಾರು ಬೆಳೆ ಉತ್ತಮವಾಗಿ ಬರಲಿವೆ. ರಾಜಕೀಯವಾಗಿ ಡೋಲಾಯಮಾನ ಸ್ಥಿತಿ ಸುಧಾರಣೆ ಆಗಲಿದೆ. ಯಡಿಯೂರಪ್ಪ ಸರ್ಕಾರ ಸುಭದ್ರವಾಗಿರಲಿದೆ ಎಂದು ಕಾರ್ಣಿಕವನ್ನು ದೇವಸ್ಥಾನದ ಪ್ರಧಾನ ಅರ್ಚಕ ಸಂತೋಷ ಭಟ್ ಗುರೂಜಿ ವಿಶ್ಲೇಷಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top