ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರೂ ಕೃಷಿ ಕಾಯ್ದೆಗಳನ್ನು ವಿರೋಧಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಸೂದೆ ಪ್ರತಿಯನ್ನು ದೆಹಲಿ ವಿಧಾನಸಭೆಯಲ್ಲಿ ಹರಿದು ಹಾಕಿದ್ದಾರೆ.
ಕೊರೋನಾ ಸಂಕಷ್ಠದ ಸಂದರ್ಭದಲ್ಲಿ ಕೃಷಿ ಕಾಯ್ದೆಗಳನ್ನು ತರಾತುರಿಯಲ್ಲಿ ಜಾರಿಮಾಡುವ ಅಗತ್ಯವೇನಿತ್ತು ಪ್ರಶ್ನಿಸಿದ್ದಾರೆ. ಈ ಬ್ರಿಟೀಷರಿಗಿಂತ ಕೆಟ್ಟವರಾಗಬಾರದು ಎಂದು ಕಟು ಶಬ್ಧಗಳಿಂದ ಟೀಕಿಸಿದ್ದಾರೆ. ಈ ಕಾನೂನುಗಳನ್ನು ಬಿಜೆಪಿಯ ಚುನಾವಣೆ ಫಂಡ್ಗಾಗಿ ಮಾಡಲಾಗಿದೆ. ರೈತರಿಗಲ್ಲ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.
2 ಡಿಗ್ರಿ ಸೆಲ್ಸಿಯಸ್ ಚಳಿಯಲ್ಲಿ ರಸ್ತೆಯಲ್ಲಿ ಕುಳಿತಿರುವ ರೈತರನ್ನು ನೋಡಿದರೆ ನೋವಾಗುತ್ತದೆ. ನಾನು ಮೊದಲು ಈ ದೇಶದ ನಾಗರಿಕ, ಆಮೇಲೆ ಮುಖ್ಯಮಂತ್ರಿ ಎಂದಿರುವ ಕೇಜ್ರಿವಾಲ್, ರೈತರ ಬೇಡಿಕೆ ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.ಆಮ್ ಆದ್ಮಿ ಪಕ್ಷದ ಶಾಸಕರು ಸಹ ಕೃಷಿ ಕಾಯ್ದೆಯ ಪ್ರತಿಗಳನ್ನು ಹರಿದಿದ್ದಾರೆ. ಜೊತೆಗೆ, ಕೇಂದ್ರದ ಕೃಷಿ ಕಾಯ್ದೆಗೆ ಪ್ರತಿಕೂಲವಾಗಿ ಮೂರು ಹೊಸ ಮಸೂದೆಗಳನ್ನ ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಈ ಮೂಲಕ ಕೇಂದ್ರದ ಕಾಯ್ದೆಗಳಿಗೆ ಪ್ರತಿಯಾಗಿ ಹೊಸ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದ ಪಂಜಾಬ್, ರಾಜಸ್ಥಾನ ಬಳಿಕ ದೆಹಲಿ ಮೂರನೇ ರಾಜ್ಯವಾಗಿದೆ.



