ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆಯೇ ಯಾಕೆ?: ಡಿ.ಕೆ. ಶಿವಕುಮಾರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನು ಮಾತ್ರಾನಾ? ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆಯೇ ಯಾಕೆ? ನನ್ನ ಮೇಲೆ ನಡೆಯುತ್ತಿರುವ ತನಿಖೆ ದ್ವೇಷದ ರಾಜಕಾರಣವಲ್ಲವೇ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಬಿಐ ಕಚೇರಿಗೆ ಭೇಟಿ ನೀಡುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ,’ರಾಜಕೀಯ ದ್ವೇಷದಿಂದ ನನ್ನ ವಿರುದ್ಧ ಸಿಬಿಐ ವಿಚಾರಣೆ ನಡೆಸಲಾಗುತ್ತಿದೆ. ನಾನು ಮಾಡಬಾರದ ಕೆಲಸ ಮಾಡಿಲ್ಲ. ಹೀಗಾಗಿ ಹೆದರುವ ಅಗತ್ಯವಿಲ್ಲ. ನಾನು ವಿಚಾರಣೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ಇಡೀ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ನನ್ನ ವಿರುದ್ಧ ತನಿಖೆ ಮಾಡುವಂತೆ ಸಿಬಿಐಗೆ ಅನುಮತಿ ನೀಡಿದ್ದಾರೆ. ಇದುವರೆಗೂ ಯಾರ ಮೇಲೆ ಈ ರೀತಿ ತನಿಖೆ ಮಾಡಿಸಿದ್ದಾರೆ? ರಾಜ್ಯದಲ್ಲಿ ನಾನೊಬ್ಬನೇ ಆಸ್ತಿ ಸಂಪಾದಿಸಿದ್ದೇನಾ? ನನ್ನ ಮೇಲೆ ಯಾವುದಾದರೂ ದೂರು ದಾಖಲಾಗಿದೆಯಾ? ಯಾವುದಾದರೂ ಆರೋಪ ಸಾಬೀತಾಗಿದೆಯಾ? ಯಾರ ಬಳಿಯಾದರೂ ನಾನು ಲಂಚ ಪಡೆದಿದ್ದೇನಾ? ಅಧಿಕಾರ ದುರುಪಯೋಗ ಮಾಡಿಕೊಂಡಿದ್ದೇನಾ? ಇಂಧನ ಸಚಿವ ಆಗಿದ್ದಾಗ ಅಕ್ರಮ ಮಾಡಿದ್ದೇನಾ? ಯಡಿಯೂರಪ್ಪನವರೇ ಅಧಿಕಾರದಲ್ಲಿದ್ದಾರೆ. ಈ ಎಲ್ಲದರ ಬಗ್ಗೆ ತನಿಖೆ ಮಾಡಿಸಲಿ. ಅದನ್ನು ಬಿಟ್ಟು ಸಿಬಿಐಗೆ ಕೊಡುವ ಅಗತ್ಯ ಏನಿತ್ತು?’ ಎಂದು ಪ್ರಶ್ನಿಸಿದರು.

ಇನ್ನು ಸರ್ಕಾರದ ವಿರುದ್ಧ ಕಿಡಿಕಾರಿದ ಡಿಕೆಶಿ, ‘ಇದೊಂದು ತನಿಖೆ ಮಾಡುವ ಪ್ರಕರಣವಲ್ಲ ಎಂದು ಅಡ್ವೊಕೇಟ್ ಜನರಲ್ ಅವರೇ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ರಾಜ್ಯದಲ್ಲಿರುವ ಎಸಿಬಿಯಿಂದಲೇ ವಿಚಾರಣೆ ನಡೆಸಬಹುದು ಎಂದು ತಿಳಿಸಿದ್ದಾರೆ. ಆದರೂ ಸರ್ಕಾರದ ಒತ್ತಡದ ಮೇಲೆ ಈ ವಿಚಾರಣೆ ನಡೆಯುತ್ತಿದೆ’ ಎಂದರು. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐಯಿಂದ ಸಮನ್ಸ್‌ ಪಡೆದಿದ್ದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಸಧ್ಯ ವಿಚಾರಣೆಗಾಗಿ ಸಿಬಿಐ ಕಚೇರಿಗೆ ಆಗಮಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *