ಬೆಂಗಳೂರು : ಆಯುಷ್ ವೈದ್ಯರಿಗೆ ಶಸ್ತ್ರಚಿಕಿತ್ಸೆ ತರಬೇತಿ ನೀಡಲು ಕೇಂದ್ರ ಸರ್ಕಾರ ಅವಕಾಶ ನೀಡಿರುವುದನ್ನು ವಿರೋಧಿಸಿರುವ ಭಾರತೀಯ ವೈದ್ಯಕೀಯ ಸಂಘ (ಐಎಂಎ) ನಾಳೆ ಖಾಸಗಿ ಆಸ್ಪತ್ರೆಗಳು ಒಪಿಡಿ ಬಂದ್ ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರ, ವೈದ್ಯಕೀಯ ಸೇವೆಯಲ್ಲಿ ವ್ಯತ್ಯಾಸವಾಗದಂತೆ ನೋಡಿಕೊಳ್ಳಲು ಸರ್ಕಾರಿ ಆಸ್ಪತ್ರೆಗಳ ವೈದ್ಯರ ರಜೆ ರದ್ದುಪಡಿಸಿ ಆದೇಶ ಹೊರಡಿಸಿದೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.ನಾಳೆ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ತುರ್ತು ಹಾಗೂ ಕೋವಿಡ್-19 ಸೇವೆಗಳನ್ನು ಹೊರತು ಪಡಿಸಿ ಉಳಿದ ಸೇವೆಗಳನ್ನು ಸ್ಥಗಿತಗೊಳಿಸಲು ವೈದ್ಯರಿಗೆ ಕರೆ ನೀಡಿರುತ್ತಾದೆ. ಆದುದ್ದರಿಂದ ನಿಮ್ಮ ಅಧೀನದಲ್ಲಿನ ಆಸ್ಪತ್ರೆಗಳಲ್ಲಿ ಹೊರ ರೋಗಿ ವಿಭಾಗ ಸೇರಿದಂತೆ ಎಲ್ಲಾ ಸೇವೆಗಳು ಯಾವುದೇ ವ್ಯತ್ಯಾಯವಿಲ್ಲದಂತೆ ಎಂದಿನಂತೆ ಕಾರ್ಯನಿರ್ವಹಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದು. ಮುಷ್ಕರದ ಅವಧಿಯಲ್ಲಿ ವೈದ್ಯರಿಗೆ ಯಾವುದೇ ರಜೆಯನ್ನು ಮಂಜೂರು ಮಾಡದಿರಲು ಸರ್ಕಾರ ಸೂಚಿಸಿದೆ.



