Connect with us

Dvgsuddi Kannada | online news portal | Kannada news online

ತುಂತುರು, ಹನಿ ನೀರಾವರಿ‌ ಯೋಜನೆ‌ಯ ಶೇ.90 ರಷ್ಟು ಸಹಾಯಧನ ಪಡೆಯಲು ಈ ದಾಖಲೆ ಅಗತ್ಯ

images 2023 12 11T134235.446

ಪ್ರಮುಖ ಸುದ್ದಿ

ತುಂತುರು, ಹನಿ ನೀರಾವರಿ‌ ಯೋಜನೆ‌ಯ ಶೇ.90 ರಷ್ಟು ಸಹಾಯಧನ ಪಡೆಯಲು ಈ ದಾಖಲೆ ಅಗತ್ಯ

ದಾವಣಗೆರೆ: ಅಟಲ್ ಭೂ ಜಲ ಯೋಜನೆ , ಮತ್ತು ರಾಷ್ಟ್ರೀಯ ತೋಟಗಾರಿಕೆ ಮಿಷನ್, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ನೀರಿನ ಕಡಿಮೆ ಬಳಕೆಗೆ ಅನುಕೂಲವಾಗುವಂತೆ ತುಂತುರು ಮತ್ತು ಸೂಕ್ಷ್ಮ ನೀರಾವರಿ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆ ಮೂಲಕ ಅತಿ ಸಣ್ಣ ಎಸ್ಸಿ, ಎಸ್ಟಿ ರೈತರಿಗೆ ಯೋಜನೆಗೆ ತಗುಲಿದ ವೆಚ್ಚದ ಶೇಕಡ 90ರಷ್ಟು ಮತ್ತು ಇತರೆ ಎಲ್ಲಾ ವರ್ಗದ ರೈತರಿಗೆ ಶೇಕಡ 45ರಷ್ಟು ಸಹಾಯಧನ ಸಿಗಲಿದೆ. ಸಹಾಯಧನ ಪಡೆಯಲು‌ ರೈತರು ಕಡ್ಡಾಯವಾಗಿ ಈ ದಾಖಲೆ ಸಲ್ಲಿಸುವುದು ಅಗತ್ಯವಾಗಿದೆ.

ಚಿಕ್ಕಬಳ್ಳಾಪುರ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ಚಾಮರಾಜನಗರ, ದಾವಣಗೆರೆ, ಗದಗ, ಹಾಸನ, ಕೋಲಾರ, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಸೂಕ್ಷ್ಮ , ತುಂತುರು ಮತ್ತು ಹನಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನಿಸಿದೆ. ಈ ಯೋಜನೆ ಲಾಭ ಪಡೆಯಲು ಮತ್ತು ಹೆಚ್ಚಿನ ಮಾಹಿತಿಗೆ ರೈತರು ಆಯಾ ತಾಲ್ಲೂಕಿನ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬೇಕಿದೆ. ಈ ಮೂಲಕ ಯೋಜನೆ ಸದ್ಬಳಕೆ ಮಾಡಿಕೊಳ್ಳಲು ಸೂಚಿಸಲಾಗಿದೆ.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಮತ್ತು ಅಟಲ್ ಬಿಹಾರಿ ಯೋಜನೆ ಅಡಿ ತುಂತುರು ಮತ್ತು ಹನಿ ನೀರಾವರಿ ಕೃಷಿ ಘಟಕಗಳನ್ನು ಕೃಷಿ ಬೆಳೆಗಳಿಗೆ ನೀಡಲು ಆದೇಶಿಸಲಾಗಿದೆ. ಎಲ್ಲಾ ವರ್ಗದ ರೈತರಿಗೆ ಎರಡು ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಣ್ಣ, ಅತಿ ಸಣ್ಣ ರೈತರಿಗೆ ಶೇಕಡ 90ರಷ್ಟು ಇತರೆ ವರ್ಗದ ರೈತು ಶೇಕಡ 45ರಷ್ಟು ಸಹಾಯಧನ ನೀಡಲಾಗುವುದು.

  • ಸಹಾಯಧನ ಪಡೆಯಲು ಬೇಕಾದ ದಾಖಲೆಗಳು
  • ಅರ್ಜಿ ನಮೂನೆ
  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • 2 ಫೋಟೋ
  • ಜಾತಿ ಪ್ರಮಾಣ ಪತ್ರ ( ಪ.ಜಾ/ ಪ ಪಂ ದವರಿಗೆ ಮಾತ್ರ)
  • ಪಹಣಿ
  • ಕೊಳವೆ ಬಾವಿ ಪ್ರಮಾಣ ಪತ್ರ
  • ವಿದ್ಯುತ್ ಪರವಾನಗಿ
  • ಬೆಳೆ ದೃಡಿಕರಣ ಪತ್ರ (ಖುಷ್ಕ ಜಮೀನು ಮಾತ್ರ)
  • 20 ರೂ. ಛಾಪ ಕಾಗದಲ್ಲಿ ಚೆಕ್ ಬಂದಿಯನ್ನು ನೋಟರಿ ಮಾಡಿಸಬೇಕು

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

  • astrology today astrology today

    ಪ್ರಮುಖ ಸುದ್ದಿ

    ಮಂಗಳವಾರದ ರಾಶಿ ಭವಿಷ್ಯ 24 ಜೂನ್ 2025

    By

    ಈ ರಾಶಿಯ ವಿಚ್ಛೇದನ ಪಡೆದ ಪತಿ ಪತ್ನಿ ಮತ್ತೆ ಸೇರೋ ಬಯಕೆ, ಈ ರಾಶಿಯ ಮಾಜಿ ಸಂಗಾತಿ ಹಠಾತ್ ಭೇಟಿಯಾಗುವರು, ಮಂಗಳವಾರದ...

To Top