Connect with us

Dvgsuddi Kannada | online news portal | Kannada news online

ಕನ್ನಡಿಗರು ಕೊಟ್ಟ ಹೆಸರಿಗೆ ಧಕ್ಕೆ ತರುವ ಕೆಲಸ ಮಾಡಿಲ್ಲ ಎಂದು ಕಣ್ಣೀರು ಹಾಕಿದ ಅನುಶ್ರೀ

ಪ್ರಮುಖ ಸುದ್ದಿ

ಕನ್ನಡಿಗರು ಕೊಟ್ಟ ಹೆಸರಿಗೆ ಧಕ್ಕೆ ತರುವ ಕೆಲಸ ಮಾಡಿಲ್ಲ ಎಂದು ಕಣ್ಣೀರು ಹಾಕಿದ ಅನುಶ್ರೀ

ಡಿವಿಜಿ ಸುದ್ದಿ, ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ ಸಂಬಂಧ ಈಗಾಗಲೇ ಸಿಸಿಬಿ ವಿಚಾರಣೆ ಎದುರಿಸಿರುವ ನಿರೂಪಕಿ, ನಟಿ ಅನುಶ್ರೀ ಕಣ್ಣೀರು ಹಾಕಿದ್ದಾರೆ.  ಕನ್ನಡಿಗರು ಕೊಟ್ಟ ಹೆಸರಿಗೆ ಧಕ್ಕೆ ತರುವ ಕೆಲಸ ನಾನು ಮಾಡಿಲ್ಲ ಎಂದು ಹೇಳಿದ್ದಾರೆ.

ಈ ಸಂಬಂಧ ವೀಡಿಯೋ ಮಾಡಿರುವ ಅವರು, ಈ ವೀಡಿಯೋದಲ್ಲಿ ನಾನು ನನ್ನನ್ನು ಸಮರ್ಥಿಸಿಕೊಳ್ಳಲು ಅಥವಾ ಕರುಣೆಗೋಸ್ಕರ ಮಾಡುತ್ತಿಲ್ಲ. ಎಲ್ಲರೂ ತಮ್ಮ ತಮ್ಮ ಅಭಿಪ್ರಾಯಗಳನ್ನು ಸುತ್ತಮುತ್ತ ಹೇಳುತ್ತಿದ್ದಾರೆ. ಈ ಅಭಿಪ್ರಾಯಗಳು ನನ್ನ ಬಗ್ಗೆ ಇರುವುದರಿಂದ ಈ ವೀಡಿಯೋ ಮಾಡುತ್ತಿದ್ದೇನೆ ಎಂದು ಹೇಳಿ ಗಳಗಳನೇ ಕಣ್ಣೀರು ಹಾಕಿದ್ದಾರೆ.

anushree 2

2020ರ ಸೆಪ್ಟೆಂಬರ್ 24 ನನ್ನ ಜೀವನದ ಯಾವ ಘಟ್ಟದಲ್ಲೂ ನಾನು ಮತ್ತೆ ನೆನಪಿಸಿಕೊಳ್ಳೋದಕ್ಕೆ ಇಷ್ಟಪಡದಿರುವಂತಹ ದಿನ. 12 ವರ್ಷಗಳ ಹಿಂದೆ ನಾನು ಡ್ಯಾನ್ಸ್ ರಿಯಾಲಿಟಿ ಶೋ ಒಂದರಲ್ಲಿ ಗೆದ್ದಾಗ, ಆ ದಿನ ಭವಿಷ್ಯದಲ್ಲಿ ಮುಳ್ಳಾಗುತ್ತೆ ಅಂತ ಅಂದುಕೊಂಡಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನೋಟಿಸ್ ಬಂದಿರುವುದು ನನಗೆ ಬೇಜಾರಾಗಿಲ್ಲ. ಸಿಸಿಬಿ ಕಚೇರಿಗೆ ಹೋದ ಮಾತ್ರಕ್ಕೆ ನಾನು ಅಪರಾಧಿ ಅಥವಾ ಆರೋಪಿ ಅಂತ ಆಗುವುದಿಲ್ಲ. ಆ ವಿಚಾರದಲ್ಲಿ ನನ್ನನ್ನು ಬಿಂಬಿಸಿದ ರೀತಿ ನನಗೆ ತುಂಬಾನೇ ನೋವು ಮಾಡಿತ್ತು. ನೋವು ತುಂಬಾ ಸಣ್ಣ ಪದ. ಕಳೆದ ಒಂದು ವಾರದಿಂದ ನಮ್ಮ ಮನೆಯವರ ನೆಮ್ಮದಿಯನ್ನು ಹಾಳು ಮಾಡಿತ್ತು. ಆದರು ಕೂಡ ಈ ಕಷ್ಟಕಾಲದಲ್ಲಿ ಏನೂ ಹೆಳದೆ, ಏನೂ ಕೇಳದೆ ಅನುಶ್ರೀ ನೀವೇನು ಅಂತ ನಮಗೆ ಚೆನ್ನಾಗಿ ಗೊತ್ತು. ನಿಮ್ಮ ಮೇಲೆ ನಮಗೆ ಅಪಾರವಾದ ನಂಬಿಕೆ ಇದೆ ಅಂತ ನನ್ನ ಜೊತೆ ನಿಂತಿರುವ ಎಲ್ಲಾ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಇದನ್ನು ನಾನು ಯಾವತ್ತೂ ಮರೆಯಲ್ಲ ಎಂದು ಹೇಳಿದ್ದಾರೆ.

ಇದನ್ನು ಮೀರಿ ಕೂಡ ಸುತ್ತಮುತ್ತ ಕೆಲವೊಂದಷ್ಟು ಅಭಿಪ್ರಾಯಗಳು, ವಿಚಾರಗಳು, ಅಂತೆಕಂತೆಗಳು ಇದು ನಮ್ಮ ನೆಮ್ಮದಿನ ತುಂಬಾನೇ ಹಾಳು ಮಾಡುತ್ತಿದೆ. ದಯಮಾಡಿ ಇಂತಹ ವಿಚಾರಗಳನ್ನು ಹರಿದಾಡಿಸುವ ಮುನ್ನ ಒಂದು ಬಾರಿ ನಮ್ಮ ಮನಸ್ಥಿತಿ ಬಗ್ಗೆ ಯೋಚನೆ ಮಾಡಿ. ನಾನಿಷ್ಟೆ ನಿಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇನೆ ಎಂದು ಮನವಿ ಮಾಡಿಕೊಂಡಿದ್ದಾರೆ.

ಇಷ್ಟೊಂದು ಕಷ್ಟದ ದಿನಗಳಲ್ಲಿ ನನಗೆ ನೆರಳಾಗಿ ನಿಂತಿರುವ ನನ್ನ ಕುಟುಂಬ, ನನ್ನ ತಂಡ, ಸ್ನೇಹಿತರು ಎಲ್ಲರಿಗೂ ಧನ್ಯವಾದಗಳು. ನನ್ನ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ನನ್ನನ್ನು ಬೆಂಬಲಿಸುತ್ತಿರೋ ಮಾಧ್ಯಮಮಿತ್ರರಿಗೂ ಧನ್ಯವಾದ. ಕನ್ನಡಿಗರು ಕೊಟ್ಟ ಈ ಹೆಸರಿಗೆ ಯಾವುದೇ ಧಕ್ಕೆ ಬರುವಂತಹ ಯಾವುದೇ ಕೆಲಸವನ್ನು ನಾನು ಮಾಡಿಲ್ಲ. ಮುಂದೆಯೂ ಮಾಡಲ್ಲ ಎಂದು ಹೇಳುತ್ತಾ ಅನುಶ್ರೀ ಹೇಳಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top