ಡಿವಿಜಿ ಸುದ್ದಿ, ಬೆಂಗಳೂರು: ಡ್ರಗ್ಸ್ ಕೇಸ್ನಲ್ಲಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ನನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಪೆಡ್ಲರ್ಗಳಿಗೆ ಗೋವಾದಲ್ಲಿ ಆಶ್ರಯ ನೀಡಿದ್ದ ಆರೋಪದ ಮೇರೆ ಪೊಲೀಸರು ದರ್ಶನ್ ಲಮಾಣಿ ಬಂಧಿತನಾಗಿದ್ದಾನೆ.
ಡಾರ್ಕ್ ವೆಬ್ ಸೈಟ್ನಲ್ಲಿ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ ತನಿಖೆ ಕೈಗೊಂಡ ಸಿಸಿಬಿ ಅಧಿಕಾರಿಗಳು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನವೆಂಬರ್ 4ರಂದು ದಾಳಿ ನಡೆಸಿದ್ದರು. ಫಾರಿನ್ ಪೋಸ್ಟ್ ಆಫೀಸ್ಗೆ ವಿದೇಶದಿಂದ ಡ್ರಗ್ಸ್ ಪಾರ್ಸೆಲ್ ಬರುತಿತ್ತು. ಈ ಬಗ್ಗೆ ತನಿಖೆ ಕೈಗೊಂಡಾಗ ಆರೋಪಿ ಸುಜಯ್ ಎಂಬಾತ ಗಾಂಜಾ ಸಮೇತ ಸಿಸಿಬಿ ಕೈಗೆ ಸಿಕ್ಕಿಬಿದ್ದಿದ್ದ.ಸುಜಯ್ ವಿಚಾರಣೆ ವೇಳೆ ಇನ್ನಿಬ್ಬರು ಆರೋಪಿಗಳಾದ ಹೇಮಂತ್ ಮತ್ತು ಸುನೀಶ್ ಬಗ್ಗೆ ಮಾಹಿತಿ ಹೊರಬಿದ್ದಿತ್ತು.
ಈ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಈ ಇಬ್ಬರು ಗೋವಾದಲ್ಲಿ ಪತ್ತೆಯಾಗಿದ್ದರು. ಇವರ ಜತೆಗೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿ ಕೂಡ ಅರೆಸ್ಟ್ ಆಗಿದ್ದಾನೆ . ಹೇಮಂತ್ ಮತ್ತು ಸುನೀಶ್ಗೆ ಗೋವಾದಲ್ಲಿ ದರ್ಶನ್ ಲಮಾಣಿ ಆಶ್ರಯ ನೀಡಿದ್ದ. ಈ ಇಬ್ಬರ ಜೊತೆ ದರ್ಶನ್ ಗೆ ನಿಕಟ ಸಂಪರ್ಕ ಇತ್ತು ಎನ್ನಲಾಗಿದೆ.



