ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಇದುವರೆಗೆ ಮೀನು ಮಾತ್ರ ಹಿಡಿದಿದೆ. ಇನ್ನೂ ತಿಮಿಂಗಲ ಹಿಡಿಯೋದು ಬಾಕಿ ಇದೆ ಎಂದು ನಿರ್ದೇಶಕ, ಪತ್ರಕರ್ತ ಇಂದ್ರಜಿತ್ ಲಂಕೇಶ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಕೇವಲ ನಟಿಯರು ಮತ್ತು ಪ್ಲೇಡರ್ಗಳಷ್ಟೇ ಇಲ್ಲ. ಇದರಲ್ಲಿ ಪ್ರಮುಖ ನಟ, ನಟಿಯರು, ನಿರ್ದೇಶಕರು, ನಿರ್ಮಾಪಕರು, ರಾಜಕಾರಣಿಗಳ ಮಕ್ಕಳು ಭಾಗಿಯಾಗಿದ್ದಾರೆ ಎಂದರು.
ನಾನು ವೈಯಕ್ತಿಕವಾಗಿ ಯಾರ ಮೇಲೂ ಆರೋಪ ಮಾಡುತ್ತಿಲ್ಲ. ಇದು ರಾಜಕೀಯ ವಿಷಯವಲ್ಲ. ಅಧಿವೇಶನದಲ್ಲಿ ಚರ್ಚೆಯಾಗಬೇಕು ಎಂದು ಒತ್ತಾಯಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ವಿಚಾರಣೆಗಾಗಿ ಕರೆದಿತ್ತು. ಆದರೆ, ಅಧಿವೇಶನದ ನಡೆಯುತ್ತಿರುವುದರಿಂದ ಇಂದ್ರಜಿತ್ ಲಂಕೇಶ್ ವಿಚಾರಣೆ ಮುಂದೂಡಿದೆ.



