Connect with us

Dvgsuddi Kannada | online news portal | Kannada news online

ದಾವಣಗೆರೆ; ಪೊಲೀಸ್ ಭದ್ರತೆಯೊಂದಿಗೆ ನಾಳೆ ಭದ್ರಾ ನಾಲೆ ಅನಧಿಕೃತ ಪಂಪ್‌ಸೆಟ್‌ ತೆರವು ಕಾರ್ಯಾಚರಣೆ

ದಾವಣಗೆರೆ

ದಾವಣಗೆರೆ; ಪೊಲೀಸ್ ಭದ್ರತೆಯೊಂದಿಗೆ ನಾಳೆ ಭದ್ರಾ ನಾಲೆ ಅನಧಿಕೃತ ಪಂಪ್‌ಸೆಟ್‌ ತೆರವು ಕಾರ್ಯಾಚರಣೆ

ದಾವಣಗೆರೆ; ಭದ್ರಾ ಅಚ್ಚುಕಟ್ಟು ಕೊನೆಯ ಭಾಗದವರಿಗೆ ಹಾಗೂ ಕಡಿಯುವ ನೀರನ್ನು ಪೂರೈಸುವ ಸಲುವಾಗಿ ನಾಳೆ (ಏ.17) ಅನಧಿಕೃತ ಪಂಪ್‌ಸೆಟ್‌ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಭದ್ರಾ ನಾಲಾ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ದಾವಣಗೆರೆ ತಾಲ್ಲೂಕು ಮತ್ತು ಮಾಯಕೊಂಡ ಹೋಬಳಿ ವ್ಯಾಪ್ತಿಯಲ್ಲಿ ಬರುವ ದಾವಣಗೆರೆ ಶಾಖಾ ಕಾಲುವೆ 0.30
ಕಿಮೀ ಯಿಂದ 56.00 ಕಿಮೀವರೆಗೆ ಅನಧಿಕೃತ ಪಂಪ್‌ಸೆಟ್‌ ತೆರವುಗೊಳಿಸುವ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ. ಅನಧಿಕೃತವಾಗಿ ನೀರನ್ನು ಎತ್ತಿಕೊಳ್ಳಲು ಅಳವಡಿಸಲಾಗಿರುವ ಪಂಪ್‌ಸೆಟ್‌ಗಳನ್ನು ತಕ್ಷಣ ತೆರವುಗೊಳಿಸಲು ಜಿಲ್ಲಾಧಿಕಾರಿಗಳು‌ ಸೂಚಿಸಿದ್ದಾರೆ. ತಪ್ಪಿದಲ್ಲಿ ಕರ್ನಾಟಕ ನೀರಾವರಿ ಕಾಯ್ದೆ ಅಡಿಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ. ಬೆಸ್ಕಾಂ, ಪೊಲೀಸ್,ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ತಹಶೀಲ್ದಾರ್ ಸೇರಿದಂತೆ ಇತರೆ ಅಧಿಕಾರಿಗಳೊಂದಿಗೆ ಸೂಕ್ತ ಭದ್ರತೆಯೊಂದಿಗೆ ಅನಧಿಕೃತ ಪಂಪ್‌ಸೆಟ್‌ ತೆರವುಗೊಳಿಸುವಂತೆ ಸೂಚಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top