ದಾವಣಗೆರೆ: ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ಜಿಲ್ಲೆಯ ಎಲ್ಲಾ ಬಿಎಲ್ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್ಒಗಳನ್ನು ಅಥವಾ ಚುನಾವಣಾ ವೆಬ್ಸೈಟ್ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್ವೈಸರ್ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.
ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.
1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ. ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳ ಬೂತ್ ಮಟ್ಟದ ಅಧಿಕಾರಿಗಳು (BLO) ಜೂನ್ 30 ರಿಂದಲೇ ಎನುಮೆರೇಷನ್ ಫಾರಂ ಗಳೊಂದಿಗೆ (Enumeration Forms) ಮತದಾರರ ಮನೆ ಮನೆಗೆ ಭೇಟಿ ನೀಡಲು ಪ್ರಾರಂಭಿಸಿದ್ದಾರೆ. ಈ ಮಾಹಿತಿ ಸಂಗ್ರಹ ಹಾಗೂ ಸಂಗ್ರಹಿಸಿದ ನಮೂನೆಗಳ ಗಣಕೀಕರಣ ಪ್ರಕ್ರಿಯೆಯು ಜೂನ್ 30 ರಿಂದ ಜುಲೈ 29 ರವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ ಜೂನ್ 16 ರವರೆಗೆ ಒಟ್ಟು 14,99,282 ಮತದಾರರಿದ್ದು, ಬಿಎಲ್ಒಗಳಿಗೆ ಅಗತ್ಯವಿರುವ ಎಲ್ಲಾ ಫಾರಂಗಳನ್ನು ಮುದ್ರಿಸಿ ವಿತರಿಸಲಾಗಿದೆ.
ವಿಧಾನಸಭಾವಾರು ಎನುಮೆರೇಷನ್ ನಮೂನೆ ವಿತರಣೆ ಮತ್ತು ಗಣಕೀಕರಣ ಪ್ರಗತಿ:ಜಿಲ್ಲೆಯ ಒಟ್ಟು 14,99,282 ಮತದಾರರ ಪೈಕಿ ಇಂದಿನವರೆಗೆ ಬಿಎಲ್ಒಗಳು ಒಟ್ಟು 14,99,282 ಎನುಮೆರೇಷನ್ ನಮೂನೆಗಳನ್ನು ವಿತರಿಸಿದ್ದು, ಈ ಪೈಕಿ 8,28,097 ನಮೂನೆಗಳನ್ನು ಗಣಕೀಕರಿಸಲಾಗಿದೆ.
ಕ್ಷೇತ್ರವಾರು ವಿವರ:103-ಜಗಳೂರು: ಒಟ್ಟು 2,00,836 ಮತದಾರರಿದ್ದು, ಬಿಎಲ್ಒಗಳಿಂದ ಎಲ್ಲಾ 2,00,836 ನಮೂನೆಗಳನ್ನು ವಿತರಿಸಲಾಗಿದ್ದು, 1,15,912 ನಮೂನೆಗಳನ್ನು ಗಣಕೀಕರಿಸಲಾಗಿದೆ.
105-ಹರಿಹರ: ಒಟ್ಟು 2,11,023 ಮತದಾರರಿದ್ದು, ಎಲ್ಲಾ 2,11,023 ನಮೂನೆಗಳನ್ನು ವಿತರಿಸಲಾಗಿದ್ದು,
1,41,875 ನಮೂನೆಗಳನ್ನು ಗಣಕೀಕರಿಸಲಾಗಿದೆ.
106-ದಾವಣಗೆರೆ ಉತ್ತರ : ಒಟ್ಟು 2,58,718 ಮತದಾರರಿದ್ದು, ಎಲ್ಲಾ 2,58,718 ನಮೂನೆಗಳನ್ನು ವಿತರಿಸಲಾಗಿದ್ದು, 76,613 ನಮೂನೆಗಳನ್ನು ಗಣಕೀಕರಿಸಲಾಗಿದೆ.
107-ದಾವಣಗೆರೆ ದಕ್ಷಿಣ : ಒಟ್ಟು 2,27,996 ಮತದಾರರಿದ್ದು, ಎಲ್ಲಾ 2,27,996 ನಮೂನೆಗಳನ್ನು ವಿತರಿಸಲಾಗಿದ್ದು, 79,545 ನಮೂನೆಗಳನ್ನು ಗಣಕೀಕರಿಸಲಾಗಿದೆ.
108-ಮಾಯಕೊಂಡ : ಒಟ್ಟು 1,97,048 ಮತದಾರರಿದ್ದು, ಎಲ್ಲಾ 1,97,048 ನಮೂನೆಗಳನ್ನು ವಿತರಿಸಲಾಗಿದ್ದು, 1,54,951 ನಮೂನೆಗಳನ್ನು ಗಣಕೀಕರಿಸಲಾಗಿದೆ.
109-ಚನ್ನಗಿರಿ : ಒಟ್ಟು 2,03,628 ಮತದಾರರಿದ್ದು, ಎಲ್ಲಾ 2,03,628 ನಮೂನೆಗಳನ್ನು ವಿತರಿಸಲಾಗಿದ್ದು, 1,36,189 ನಮೂನೆಗಳನ್ನು ಗಣಕೀಕರಿಸಲಾಗಿದೆ.
110-ಹೊನ್ನಾಳಿ : ಒಟ್ಟು 2,00,033 ಮತದಾರರಿದ್ದು, ಎಲ್ಲಾ 2,00,033 ನಮೂನೆಗಳನ್ನು ವಿತರಿಸಲಾಗಿದ್ದು, 1,23,012 ನಮೂನೆಗಳನ್ನು ಗಣಕೀಕರಿಸಲಾಗಿದೆ.
ಸ್ಥಳಾಂತರ, ಮರಣ ಹಾಗೂ ದ್ವಿಪತಿ ಮತದಾರರ ಗುರುತಿಸುವಿಕೆ ಪ್ರಗತಿ:ಮನೆ ಮನೆ ಭೇಟಿ ಸಂದರ್ಭದಲ್ಲಿ ಜುಲೈ 14 ರ ವರೆಗೆ ಜಿಲ್ಲೆಯಾದ್ಯಂತ ಒಟ್ಟು 16,683 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 254 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 6431 ಶಾಶ್ವತ ವಲಸೆ, 7085 ಮರಣ ಪ್ರಕರಣ, 2838 ದ್ವಿಪ್ರತಿ ನಮೂನೆಗಳು ಹಾಗೂ 75 ಇತರೆ ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ.
ಕ್ಷೇತ್ರವಾರು ವಿವರ :ಜಗಳೂರು ಕ್ಷೇತ್ರದಲ್ಲಿ ಒಟ್ಟು 1722 ಪ್ರಕರಣಗಳನ್ನು ಗುರುತಿಸಲಾಗಿದ್ದು, ಇದರಲ್ಲಿ 34 ಸಂಗ್ರಹವಾಗದ, 754 ಶಾಶ್ವತ ವಲಸೆ, 573 ಮರಣ, 353 ದ್ವಿಪ್ರತಿ ಹಾಗೂ 8 ಇತರೆ ಪ್ರಕರಣಗಳಿವೆ.ಹರಿಹರ ಕ್ಷೇತ್ರದಲ್ಲಿ ಒಟ್ಟು 2265 ಪ್ರಕರಣಗಳು ಪತ್ತೆಯಾಗಿದ್ದು, 17 ಸಂಗ್ರಹವಾಗದ, 592 ಶಾಶ್ವತ ವಲಸೆ, 1172 ಮರಣ, 479 ದ್ವಿಪ್ರತಿ ಮತ್ತು 5 ಇತರೆ ಪ್ರಕರಣಗಳಿವೆ.
ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ಒಟ್ಟು 2049 ಪ್ರಕರಣಗಳಿದ್ದು, 22 ಸಂಗ್ರಹವಾಗದ, 694 ಶಾಶ್ವತ ವಲಸೆ, 1028 ಮರಣ, 291 ದ್ವಿಪ್ರತಿ ಹಾಗೂ 14 ಇತರೆ ಪ್ರಕರಣಗಳಿವೆ.ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು 1681 ಪ್ರಕರಣಗಳಿದ್ದು, 51 ಸಂಗ್ರಹವಾಗದ, 437 ಶಾಶ್ವತ ವಲಸೆ, 689 ಮರಣ, 493 ದ್ವಿಪ್ರತಿ ಹಾಗೂ 11 ಇತರೆ ಪ್ರಕರಣಗಳಿವೆ.
ಮಾಯಕೊಂಡ ಕ್ಷೇತ್ರದಲ್ಲಿ ಒಟ್ಟು 3578 ಪ್ರಕರಣಗಳಿದ್ದು, 76 ಸಂಗ್ರಹವಾಗದ, 1399 ಶಾಶ್ವತ ವಲಸೆ, 1558 ಮರಣ, 531 ದ್ವಿಪ್ರತಿ ಹಾಗೂ 14 ಇತರೆ ಪ್ರಕರಣಗಳಿವೆ.
ಚನ್ನಗಿರಿ ಕ್ಷೇತ್ರದಲ್ಲಿ ಜಿಲ್ಲೆಯಲ್ಲೇ 2525 ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ 34 ಸಂಗ್ರಹವಾಗದ, 1211 ಶಾಶ್ವತ ವಲಸೆ, 845 ಮರಣ, 418 ದ್ವಿಪ್ರತಿ ಹಾಗೂ 17 ಇತರೆ ಪ್ರಕರಣಗಳು ಸೇರಿವೆ.
ಹೊನ್ನಾಳಿ ಕ್ಷೇತ್ರದಲ್ಲಿ ಒಟ್ಟು 2863 ಪ್ರಕರಣಗಳನ್ನು ಗುರುತಿಸಲಾಗಿದ್ದು, ಇದರಲ್ಲಿ 20 ಸಂಗ್ರಹವಾಗದ, 1344 ಶಾಶ್ವತ ವಲಸೆ, 1220 ಮರಣ, 273 ದ್ವಿಪ್ರತಿ ಹಾಗೂ 06 ಇತರೆ ಪ್ರಕರಣಗಳು ಒಳಗೊಂಡಿವೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ ಎಂ ಗಂಗಾಧರಸ್ವಾಮಿ ಅವರು ತಿಳಿಸಿದ್ದಾರೆ.


