Connect with us

Dvgsuddi Kannada | online news portal | Kannada news online

ಕೃಷಿ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ರೈಲು ರೋಕೋ: ರೈತರು, ಪೊಲೀಸರ ನಡುವೆ ಮಾತಿನ ಚಕಮಕಿ

ರಾಜ್ಯ ಸುದ್ದಿ

ಕೃಷಿ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ರೈಲು ರೋಕೋ: ರೈತರು, ಪೊಲೀಸರ ನಡುವೆ ಮಾತಿನ ಚಕಮಕಿ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ರೈಲು ರೋಕೋ ಚಳುವಳಿಗೆ ರಾಜ್ಯದ ರೈತ ಸಂಘಟನೆಗಳು ಬೆಂಬಲ ನೀಡಿದ್ದು, ವಿವಿಧ ಜಿಲ್ಲೆಗಳ ರೈಲು ನಿಲ್ದಾಣಗಳಿಗೆ ನುಗ್ಗಿರುವ ರೈತರು ರೈಲು ತಡೆಗೆ ಯತ್ನಿಸಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ಮಾತಿನ ಚಕಮಕಿ ನಡೆದಿದೆ.

ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆವರೆಗೆ ರಾಜ್ಯಾದ್ಯಂತ ರೈಲು ತಡೆ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ, ಮೈಸೂರು, ರಾಯಚೂರು, ಬೆಳಗಾವಿ, ದಾವಣಗೆರೆ, ತುಮಕೂರು, ಹುಬ್ಬಳ್ಳಿ-ಧಾರವಾಡ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ರೈತರು ರೈಲ್ವೆ ನಿಲ್ದಾಣಗಳಿಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ, ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿ ಅನ್ನದಾತರು ಹಾಗೂ ಕಾರ್ಮಿಕ ಸಂಘಟನೆಗಳು ರೈಲ್ವೆ ನಿಲ್ದಾಣಗಳ ಬಳಿ ಪ್ರತಿಭಟನೆ ನಡೆಸಿದ್ದು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ತಳ್ಳಿ, ರೈಲು ನಿಲ್ದಾಣಗಳ ಒಳಗೆ ನುಗ್ಗಿದ್ದಾರೆ. ಪೊಲೀಸರು ಹಾಗೂ ರೈತರ ನಡುವೆ ಸಂಘರ್ಷ ಏರ್ಪಟ್ಟಿದ್ದು, ಕೆಲ ರೈತರನ್ನು ಪೊಲೀಸರು ಎಳೆದೊಯ್ದಿದ್ದಾರೆ. ಇದರಿಂದಾಗಿ ಪೊಲೀಸರು ಹಾಗೂ ರೈತರ ನಡುವೆ ಮಾತಿನಚಕಮಕಿ ನಡೆದಿದ್ದು, ಪೊಲೀಸರ ದೌರ್ಜನ್ಯವನ್ನು ಖಂಡಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top