ಬೆಳಗಾವಿ: ಸಹಕಾರಿ ಬ್ಯಾಂಕ್ ನಲ್ಲಿ ರೈತರು ಪಡೆದ ಸಾಲವನ್ನು ಅವಧಿಯೊಳಗೆ ಮರುಪಾವತಿಸಿದ್ರೆ, ಸಾಲದ ಬಡ್ಡಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಅವರು, ಸಹಕಾರಿ ಬ್ಯಾಂಕ್ ನಲ್ಲಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲ ಪಡೆದು ಅವಧಿಯೊಳಗೆ ಸಾಲ ಮರುಪಾವತಿ ಮಾಡಿದ ರೈತರ ಬಡ್ಡಿ ಮನ್ನಾ ಮಾಡಲಾಗುವುದು. ಈಗಾಗಲೇ ಸಾಲ ಮರು ಪಾವತಿ ಮಾಡಿದವರಿಗೆ ಬಡ್ಡಿ ಮನ್ನಾ ಪ್ರಯೋಜನ ಸಿಗಲಿದೆ ಎಂದರು.
ಸಾಲದ ಮೇಲಿನ ಬಡ್ಡಿಮನ್ನಾ ಮಾಡುವ ಬಗ್ಗೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿರಲಿಲ್ಲ. ಆದರೂ ಮಾಡುತ್ತಿದ್ದೇವೆ. 2018ರ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಪ್ರಣಾಳಿಕೆಯಲ್ಲಿ 1 ಲಕ್ಷದವರೆಗಿನ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿ ಯಾದ ಬಳಿಕವೂ ಮನ್ನಾ ಮಾಡಲಿಲ್ಲ ಸಿಎಂ ಕುಟುಕಿದರು.
ಈ ವೇಳೆ ಮಧ್ಯ ಪ್ರವೇಶಿಸಿದಂತ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ಧರಾಮಯ್ಯ ಸಾಲ ಮನ್ನಾ ಘೋಷಣೆಯನ್ನು ಟೀಕಿಸಿದರು. ಅಲ್ಲದೇ ರೈತರು ಸಾಲ ಕಟ್ಟಲ್ಲ ನೀವು ಬಡ್ಡಿ ಮನ್ನಾ ಮಾಡಲ್ಲ.ರೈತರ ಎರಡು ಲಕ್ಷ ರೂಪಾಯಿ ವರೆಗಿನ ಸಾಲ ಮನ್ನಾ ಮಾಡಬೇಕು. ಬರದಿಂದ ಕಂಗೆಟ್ಟ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ಪರಿಹಾರ ಕೊಡಬೇಕು ಒತ್ತಾಯಿಸಿದರು.



