Connect with us

Dvgsuddi Kannada | online news portal | Kannada news online

ಅವಧಿಯೊಳಗೆ ಸಾಲ ಕಟ್ಟಿದ ರೈತರ ಬಡ್ಡಿ ಮನ್ನಾ; ಸಿಎಂ ಸಿದ್ದರಾಮಯ್ಯ ಘೋಷಣೆ

cm siddaramaih

ಪ್ರಮುಖ ಸುದ್ದಿ

ಅವಧಿಯೊಳಗೆ ಸಾಲ ಕಟ್ಟಿದ ರೈತರ ಬಡ್ಡಿ ಮನ್ನಾ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಳಗಾವಿ: ಸಹಕಾರಿ ಬ್ಯಾಂಕ್ ನಲ್ಲಿ ರೈತರು ಪಡೆದ ಸಾಲವನ್ನು ಅವಧಿಯೊಳಗೆ ಮರುಪಾವತಿಸಿದ್ರೆ, ಸಾಲದ ಬಡ್ಡಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಅವರು, ಸಹಕಾರಿ ಬ್ಯಾಂಕ್ ನಲ್ಲಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲ ಪಡೆದು ಅವಧಿಯೊಳಗೆ ಸಾಲ ಮರುಪಾವತಿ ಮಾಡಿದ ರೈತರ ಬಡ್ಡಿ ಮನ್ನಾ ಮಾಡಲಾಗುವುದು. ಈಗಾಗಲೇ ಸಾಲ ಮರು ಪಾವತಿ ಮಾಡಿದವರಿಗೆ ಬಡ್ಡಿ ಮನ್ನಾ ಪ್ರಯೋಜನ ಸಿಗಲಿದೆ ಎಂದರು.

ಸಾಲದ ಮೇಲಿನ ಬಡ್ಡಿ‌ಮನ್ನಾ ಮಾಡುವ ಬಗ್ಗೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿರಲಿಲ್ಲ. ಆದರೂ ಮಾಡುತ್ತಿದ್ದೇವೆ. 2018ರ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಪ್ರಣಾಳಿಕೆಯಲ್ಲಿ 1 ಲಕ್ಷದವರೆಗಿನ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿ ಯಾದ ಬಳಿಕವೂ ಮನ್ನಾ ಮಾಡಲಿಲ್ಲ ಸಿಎಂ ಕುಟುಕಿದರು.

ಈ ವೇಳೆ ಮಧ್ಯ ಪ್ರವೇಶಿಸಿದಂತ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ಧರಾಮಯ್ಯ ಸಾಲ ಮನ್ನಾ ಘೋಷಣೆಯನ್ನು ಟೀಕಿಸಿದರು. ಅಲ್ಲದೇ ರೈತರು ಸಾಲ ಕಟ್ಟಲ್ಲ ನೀವು ಬಡ್ಡಿ ಮನ್ನಾ ಮಾಡಲ್ಲ.‌ರೈತರ ಎರಡು ಲಕ್ಷ ರೂಪಾಯಿ ವರೆಗಿನ ಸಾಲ ಮನ್ನಾ ಮಾಡಬೇಕು. ಬರದಿಂದ ಕಂಗೆಟ್ಟ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ಪರಿಹಾರ ಕೊಡಬೇಕು ಒತ್ತಾಯಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top