Connect with us

Dvgsuddi Kannada | online news portal | Kannada news online

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತು ಮೇ 26 ರಂದು ಮಹತ್ವದ ಸಭೆ

ಪ್ರಮುಖ ಸುದ್ದಿ

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತು ಮೇ 26 ರಂದು ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಹಾಗೂ ನೂತನ ವೇತನ ರಚನೆ ಸಂಬಂಧ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ಸಮಿತಿಯೂ ಮೇ 26ರಂದು ಮಹತ್ವದ ಸಭೆ ಕರೆದಿದೆ. ಕಳೆದ ವಾರ ಹೊರಡಿಸಿದ್ದ ಆದೇಶದ ಅನ್ವಯ ಸುಧಾಕರ್ ರಾವ್ ಅಧ್ಯಕ್ಷತೆಯ 7ನೇ ರಾಜ್ಯ ವೇತನ ಆಯೋಗದ ಅವಧಿಯನ್ನು 6 ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ. ಆದ್ದರಿಂದ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತಷ್ಟು ವಿಳಂಬವಾಗಲಿದೆ.

7ನೇ ವೇತನ ಆಯೋಗ ರಚನೆಗೊಂಡಾಗ ರಾಜ್ಯದ ಸರ್ಕಾರಿ ನೌಕರರು ಮಧ್ಯಂತರ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ, ಮಾರ್ಚ್ 29ರಂದು ಕರ್ನಾಟಕ ವಿಧಾನಸಭೆ ಚುನಾವಣೆ 2023ರ ವೇಳಾಪಟ್ಟಿ ಘೋಷಣೆಯಾಯಿತು, ತಕ್ಷಣದಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿತು. ಆದ್ದರಿಂದ ವರದಿ ತಯಾರಾಗಲಿಲ್ಲ.

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಮೇ 13ರಂದು ಪ್ರಕಟಗೊಂಡ ಬಳಿಕ ನೀತಿ ಸಂಹಿತೆ ವಾಪಸ್ ಪಡೆಯಲಾಯಿತು. 15ನೇ ಮೇ 2023ರ ಆದೇಶದಂತೆ ಕರ್ನಾಟಕ 7ನೇ ರಾಜ್ಯ ವೇತನ ಆಯೋಗವು ತನ್ನ ಕಾರ್ಯ-ಕಲಾಪಗಳನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲು ಅನುಕೂಲವಾಗುವಂತೆ ಆಯೋಗದ ಕಾಲಾವಯನ್ನು ದಿನಾಂಕ 19-5-2023 ರಿಂದ 6 ತಿಂಗಳವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು ರಾಜ್ಯ 7ನೇ ವೇತನ ಆಯೋಗ ರಚನೆ ಮಾಡಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top