ಬೇಡ ಜಂಗಮ ಜಾತಿಯೇ ಇಲ್ಲ; ವೀರಶೈವ ಜಂಗಮರು ಸುಳ್ಳು ಮಾಹಿತಿ ನೀಡಿ ಗೊಂದಲ; ಎಚ್.‌ಆಂಜನೇಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಚಿತ್ರದುರ್ಗ: ರಾಜ್ಯದಲ್ಲಿ ಬೇಡ ಜಂಗಮ ಜಾತಿಯೇ ಇಲ್ಲ . ಕೆಲವೆಡೆ ಮಾತ್ರ ಬುಡ್ಡ ಜಂಗಮರಿದ್ದಾರೆ. ಆದರೆ, ವೀರಶೈವ ಜಂಗಮರು, ಜಾತಿ ಸಮೀಕ್ಷೆಯಲ್ಲಿ ಬೇಡ ಜಂಗಮರೆಂದು ಸುಳ್ಳು ಮಾಹಿತಿ ದಾಖಲಿಸಿ ಗೊಂದಲ ಸೃಷ್ಠಿಸುತ್ತಿದ್ದಾರೆಂದು ಮಾಜಿ ಸಚಿವ ಎಚ್.ಆಂಜನೇಯ ಆರೋಪಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳಮೀಸಲಾತಿ ಸಮೀಕ್ಷೆಯಲ್ಲಿ ಬಹಳಷ್ಟು‌ ವೀರಶೈವ ಜಂಗಮರು, ತಾವು ಬೇಡ ಜಂಗಮರು ಎಂದು ಬರೆಸುತ್ತಿದ್ದಾರೆ. ಅಂಥವರ ವಿರುದ್ಧ ನ್ಯಾ.ನಾಗಮೋಹನ್‌ ದಾಸ್ ಆಯೋಗ ಕಾನೂನು ಕ್ರಮ ಕೈಗೊಳ್ಳಬೇಕು. ಬೇಡ ಜಂಗಮ ಜಾತಿ ಪ್ರಮಾಣ ಪತ್ರ ವಿತರಿಸಿರುವ ತಹಶೀಲ್ದಾರ್‌ ಜೈಲಿಗೆ ಹಾಕಬೇಕು ಎಂದು ಒತ್ತಾಯಿಸಿದರು.

ಪರಿಶಿಷ್ಟ ಜಾತಿ ಪಟ್ಟಿಯಿಂದ ಬೇಡ ಜಂಗಮ ಪದವನ್ನೇ ಕೈಬಿಡಲು ಮುಖ್ಯಮಂತ್ರಿ ಮುಂದಾಗಬೇಕು. ಈ ಕಾರ್ಯಕ್ಕೆ ಎಲ್ಲ ಪಕ್ಷಗಳು ಕೈಜೋಡಿಸಬೇಕು.‌ ಆಂಧ್ರಪ್ರದೇಶದಿಂದ ವಲಸೆ ಬಂದ ಬೇಡ ಜಂಗಮರು ಸತ್ತ ಹಂದಿ-ದನದ ಮಾಂಸ ತಿನ್ನುತ್ತಾರೆ. ಮದ್ಯ ಸಹ ಸೇವಿಸುತ್ತಾರೆ. ಮಾದಿಗರ ಬಳಿಯೂ ಬೇಡಿಕೊಂಡು ತಿನ್ನುತ್ತಾರೆ. ಬೇಡ‌ ಜಂಗಮರು‌ ರಾಜ್ಯದಲ್ಲಿ ಈಗ ಎಲ್ಲಿಯೂ ಇಲ್ಲ‌ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *