ವಿಜಯನಗರ: ಚಾಲಕನ ನಿಯಂತ್ರಣ ತಪ್ಪಿ ಬಸ್ವೊಂದು ರಸ್ತೆ ಬದಿ ಕಂದಕಕ್ಕೆ ಬಿದ್ದಿದ್ದು, ಪ್ರಯಾಣಿಕರಿಗೆ ಗಂಭೀರ ಗಾಯಗಳಾದ ದುರ್ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.
ತಾಲೂಕಿನ ಬೆಣ್ಣಿಕಲ್ಲು ಹಾಗೂ ವರಲಹಳ್ಳಿ ನಡುವೆ ಕುಕ್ಕೆಶ್ರೀ ಖಾಸಗಿ ಬಸ್ ರಸ್ತೆ ಬದಿ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್ ಪಲ್ಟಿಯಾದ ಪರಿಣಾಮ ಬಸ್ನಲ್ಲಿ ಪ್ರಯಾಣಿಕರಿಗೆ ಗಾಯಗಳಾಗಿವೆ. ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನ ಹಗರಿಬೊಮ್ಮನಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.



