ಡಿವಿಜಿ ಸುದ್ದಿ, ಬಳ್ಳಾರಿ: ಶಾಸಕ ಭೀಮಾನಾಯ್ಕ್ ಅವರ ಗುಂಡಾವರ್ತನೆ ಖಂಡಿಸಿ ಬಳ್ಳಾರಿ ಜಿಲ್ಲೆಯ ಬಿಜೆಪಿ ಘಟಕದಿಂದ ಹಗರಿಬೊಮ್ಮನಹಳ್ಳಿ ತಾಲ್ಲೂಕ್ ಬಂದ್ ಗೆ ಕರೆ ನೀಡಲಾಗಿದೆ.
ನವೆಂಬರ್ 11 ರಂದು ಬೆಳಗ್ಗೆ 9 ಗಂಟೆಗೆ ಬೃಹತ್ ಪ್ರತಿಭಟನೆ ನಡೆಸಿ, ಅಂಗಡಿ-ಮುಗ್ಗಟ್ಟುಗಳನ್ನು ಬಂದ್ ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗುವುದು ಎಂದು ಹಗರಿಬೊಮ್ಮನಹಳ್ಳಿ ಮಾಜಿ ಬಿಜೆಪಿ ಶಾಸಕ ನೇಮಿರಾಜ್ ನಾಯ್ಕ್ ಹೇಳಿದ್ದಾರೆ.
ಶಾಸಕ ಭೀಮಾನಾಯ್ಕ್ ಅವರು ಪುರಸಭೆ ಅಧ್ಯಕ್ಷ ಚುನಾವಣೆಯಲ್ಲಿ ಗುಂಡಾ ವರ್ತನೆ ತೋರಿದ್ದು, ಅವರ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿ ವಿರೋಧ ವ್ಯಕ್ತವಾಗಿದೆ. ಹೀಗಾಗಿ ನವೆಂಬರ್ 11 ರಂದು ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಬೂತ್ ಮಟ್ಟದ ಅಧ್ಯಕ್ಷರು, ಕಾರ್ಯಕರ್ತರು ಈ ಬಂದ್ ನಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೇಮಿರಾಜ್ ಕರೆ ನೀಡಿದ್ದಾರೆ.
ರೌಡಿಸಂ ಮೂಲಕ ಮೆರೆಯುತ್ತಿರುವ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ದುರ್ವರ್ತನೆ ವಿರುದ್ಧ ಪ್ರತಿಭಟನೆಗೆ ಸಾರ್ವಜನಿಕರು ಸಹ ಸ್ಪಂದಿಸಬೇಕೆಂದು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿಕೊಂಡಿದ್ದಾರೆ.



